ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm