ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm