ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am