ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
24-12-25 04:07 pm
Bangalore Correspondent
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
24-12-25 07:38 pm
HK News Desk
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
24-12-25 06:07 pm
Mangalore Correspondent
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm