ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am