ಬ್ರೇಕಿಂಗ್ ನ್ಯೂಸ್
11-12-24 10:39 pm Udupi Correspondent ಕ್ರೈಂ
ಉಡುಪಿ, ಡಿ.11: ದೇಶದ ವಿವಿಧೆಡೆ ಸ್ಟಾರ್ ಹೊಟೇಲ್ ಗಳಲ್ಲಿ ಕೊಠಡಿ ಪಡೆದು ಊಟ ತಿಂಡಿ ತಿಂದು ಸಾವಿರಾರು ರೂ. ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ 67 ವರ್ಷದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ವ್ಯಕ್ತಿ. ಆರೋಪಿ ಡಿಸೆಂಬರ್ 7 ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್ನಲ್ಲಿ ರೂಮ್ ಪಡೆದುಕೊಂಡಿದ್ದ. ಮುಂಗಡ ಹಣವನ್ನು ಡಿಸೆಂಬರ್ 9ರಂದು ಕೊಡುವುದಾಗಿ ಹೇಳಿದ್ದ. ಬಳಿಕ ಡಿಸೆಂಬರ್ 12ರಂದು ರೂಮ್ ಚೆಕ್ಔಟ್ ಮಾಡುತ್ತೇನೆ, ಅಂದೇ ಒಟ್ಟು ಹಣವನ್ನೂ ಕೊಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್ನ್ನು ನಂಬಿಸಿದ್ದ. ಹೊಟೆಲ್ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298 ರೂ. ಬಿಲ್ ಮಾಡಿದ್ದು, ಕೊನೆಗೆ ಹಣ ಕೊಡದೇ ಪರಾರಿಯಾಗಿದ್ದ.
ಈ ಬಗ್ಗೆ ಹೊಟೇಲ್ ಸಿಬಂದಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್, ಆರೋಪಿ ಜೋನ್ ನನ್ನು ಮಣಿಪಾಲದಲ್ಲೇ ಬಂಧಿಸಿದ್ದಾರೆ. ಆರೋಪಿ ದೆಹಲಿ, ಮಹಾರಾಷ್ಟ್ರದ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಂಚನೆ ಮಾಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸ್ಟಾರ್ ಹೊಟೇಲ್ಗಳಲ್ಲಿ ರೂಮ್ ಪಡೆದು ಸಾವಿರಾರು ರೂಪಾಯಿ ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದ. ಜಾನ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಆರೋಪಿಗೆ ಉಡುಪಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
A fraudster from Tamil Nadu has been arrested for deceiving a private five-star hotel in Manipal with a fake conference meeting. The Manipal police successfully arrested the accused, who has been targeting prestigious five-star hotels across the country and defrauding them.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am