ಬ್ರೇಕಿಂಗ್ ನ್ಯೂಸ್
18-12-24 09:23 pm Bangalore Correspondent ಕ್ರೈಂ
ಬೆಂಗಳೂರು, ಡಿ.18: ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ರಾಕೆಟನ್ನು ಪತ್ತೆ ಮಾಡಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸಹಿತ ಬರೋಬ್ಬರಿ 24 ಕೋಟಿ ಮೌಲ್ಯದ 12 ಕೇಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅತಿದೊಡ್ಡ ಡ್ರಗ್ ರಾಕೆಟ್ ಇದಾಗಿದೆ.
ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ಮಹಿಳೆ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಿ.13ರಂದು ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಹತ್ವದ ಕಾರ್ಯಾಚರಣೆಯಲ್ಲಿ 12 ಕೇಜಿಯಷ್ಟು ತೂಕದ ಬಿಳಿ ಮತ್ತು ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಿ ಮಹಿಳೆ ಟಿಸಿ ಪಾಳ್ಯದಲ್ಲಿ ಆಫ್ರಿಕಾ ಮೂಲದವರಿಗೆಂದೇ ಆಹಾರ ಸಾಮಗ್ರಿಗಳನ್ನು ವಿತರಿಸುವ ಅಂಗಡಿಯೊಂದನ್ನು ನಡೆಸುತ್ತಿದ್ದಾಳೆ ಎಂಬ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಅಂಗಡಿಯಲ್ಲಿದ್ದುಕೊಂಡೇ ಆಫ್ರಿಕನ್ನರಿಗೆ ಮತ್ತು ಇತರ ಗ್ರಾಹಕರಿಗೆ ಡ್ರಗ್ಸ್ ಅನ್ನೂ ಪೂರೈಕೆ ಮಾಡುತ್ತಿದ್ದಳು. ಈಕೆಗೆ ಸಪ್ಲೈ ಮಾಡುತ್ತಿದ್ದವರನ್ನು ಸರ್ಚ್ ಮಾಡುತ್ತಿದ್ದೇವೆ ಎಂದು ಬೆಂಗಳೂರು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮುಂಬೈನಿಂದ ಸೋಪ್ ಪ್ಯಾಕೆಟ್, ಒಣ ಮೀನಿನ ಪ್ಯಾಕೆಟ್ ಮೂಲಕ ಡ್ರಗ್ಸ್ ಅನ್ನು ಬೆಂಗಳೂರಿಗೆ ಪೂರೈಸುತ್ತಿದ್ದರು. ಅಲ್ಲದೆ, ಈ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಇತರರಿಗೆ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
12 ಕೇಜಿ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್, 70 ಏರ್ಟೆಲ್ ಸಿಮ್ ಅನ್ನು ವಶಕ್ಕೆ ಪಡೆಯಲಾಗಿದೆ. ಈಕೆಗೆ ಮುಂಬೈನಲ್ಲಿ ನೆಲೆಸಿರುವ ಒಬ್ಬಾಕೆ ಮಹಿಳೆಯೇ ಡ್ರಗ್ಸ್ ಪೂರೈಸುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಹಣ ಮಾಡುವುದಕ್ಕಾಗಿಯೇ ಈ ಡ್ರಗ್ಸ್ ರಾಕೆಟಲ್ಲಿ ತೊಡಗಿಸಿಕೊಂಡಿದ್ದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಅಲ್ಲದೆ, ಈಕೆ ಬಿಸಿನೆಸ್ ವೀಸಾದಲ್ಲಿ ಐದು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದು, ಅದರ ಅವಧಿ ಮುಗಿದರೂ ಅಕ್ರಮವಾಗಿ ಉಳಿದುಕೊಂಡಿದ್ದಳು.
Bengaluru, A foreign national was arrested for allegedly running a drug racket and 12 kg banned MDMA crystals worth an estimated ₹24 crore were seized from her possession here, police said on Tuesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm