ಬ್ರೇಕಿಂಗ್ ನ್ಯೂಸ್
29-12-24 10:50 pm Mangalore Correspondent ಕ್ರೈಂ
ಮಂಗಳೂರು, ಡಿ.29: ನಕಲಿ ಷೇರು ಮಾರುಕಟ್ಟೆ ಜಾಲದಲ್ಲಿ ಮಂಗಳೂರಿನ ಕದ್ರಿ ಠಾಣೆ ವ್ಯಾಪ್ತಿಯ ಮತ್ತೊಬ್ಬ ಮಹಿಳೆ 8.75 ಲಕ್ಷ ಹಣ ಕಳಕೊಂಡಿದ್ದಾರೆ. ಷೇರು ಮೂಲಕ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಯೂಟ್ಯೂಬ್ ನಲ್ಲಿ ಬಂದ ಮಾಹಿತಿಯನ್ನು ಆಧರಿಸಿ ಮೊಬೈಲ್ ಪ್ಲೇ ಸ್ಟೋರ್ ನಲ್ಲಿ SMCTK App ಅನ್ನು ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದು, ಆಬಳಿಕ ತನ್ನ ಮೊಬೈಲ್ ವಿವರ ಮತ್ತು ಬ್ಯಾಂಕ್ ಖಾತೆ ನಮೂದಿಸಿದ್ದರು.
ಆನಂತರ ಮಹಿಳೆಯ ಮೊಬೈಲ್ ನಂಬರನ್ನು ಎಸ್ ಎಂಸಿ ಗ್ಲೋಬಲ್ ಸೆಕ್ಯುರಿಟೀಸ್, ಎಸ್ ಎಂಸಿ ಮಾರ್ಕೆಟ್ ವಾಚ್ ವಾಟ್ಸಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಅದರಲ್ಲಿ ಗ್ರೂಪ್ ಅಡ್ಮಿನ್ ಆಗಿರುವ ಅಜಯ್ ಗಾರ್ಗ್ ಎಂಬಾತ ತನ್ನನ್ನು ಕಂಪನಿ ಸಿಇಓ ಎಂದು ಪರಿಚಯಿಸಿ ವಾಟ್ಸಪ್ ಕರೆ ಮಾಡಿದ್ದ. ಅಲ್ಲದೆ, ತಮ್ಮ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಸಿಗುವುದಾಗಿ ನಂಬಿಸಿದ್ದಾನೆ.
ಆನಂತರ ಖಾಸಗಿಯಾಗಿ ಚಾಟಿಂಗ್ ಮಾಡುತ್ತ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದ. ಇದರಂತೆ, ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದ ಎಸ್ಎಂಸಿಟಿಕೆ ಆಪ್ ನಲ್ಲಿ ಹಣ ಹೂಡಿಕೆ ಮಾಡಲು ಮುಂದಾಗಿದ್ದು ಆತ ನೀಡಿರುವ ಬ್ಯಾಂಕ್ ಖಾತೆಗಳಿಗೆ ಹಣವನ್ನು ರವಾನಿಸಿದ್ದಾರೆ. ಎರಡು ಬ್ಯಾಂಕ್ ಖಾತೆಗಳಿಗೆ 8,75000 ರುಪಾಯಿ ಹಣವನ್ನು ಹಂತ ಹಂತವಾಗಿ ನೆಫ್ಟ್ ಮೂಲಕ ಹಾಕಿದ್ದರು. ಆಬಳಿಕ ಏಪ್ ಅನ್ನು ಗಮನಿಸಿದಾಗ ತನ್ನ ಹಣ ದುಪ್ಪಟ್ಟು ಆಗಿರುವುದು ಕಂಡುಬಂದಿತ್ತು. ಅಲ್ಲದೆ, ಸ್ಪಷ್ಟವಾಗಿ 16,69,229 ರೂ. ಹಣ ಇರುವುದಾಗಿ ತೋರಿಸಿತ್ತು. ಈ ಹಣವನ್ನು ಹಿಂತಿರುಗಿ ಪಡೆಯಲು ಸಿಇಓ ಅಜಯ್ ಗಾರ್ಗ್ ಅವರನ್ನು ಮಹಿಳೆ ಸಂಪರ್ಕಿಸಿದ್ದಾರೆ.
ಆದರೆ ಲಾಭದ ಹಣವನ್ನು ಪಡೆಯಲು 1,97,307 ರೂ. ಹಣವನ್ನು ಟ್ಯಾಕ್ಸ್ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಹಣವನ್ನು ಕಟ್ಟಿದರೆ ಮಾತ್ರ ಲಾಭದ ಹಣ ಸಿಗುತ್ತದೆ ಎಂದು ಆತ ಹೇಳಿದ್ದಾನೆ. ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Mangalore kadri Woman looses 8.75 lakhs in fake stock market after watching fake youtube video on stock market. A case has been registered at the CEN police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm