ಬ್ರೇಕಿಂಗ್ ನ್ಯೂಸ್
29-12-24 10:50 pm Mangalore Correspondent ಕ್ರೈಂ
ಮಂಗಳೂರು, ಡಿ.29: ನಕಲಿ ಷೇರು ಮಾರುಕಟ್ಟೆ ಜಾಲದಲ್ಲಿ ಮಂಗಳೂರಿನ ಕದ್ರಿ ಠಾಣೆ ವ್ಯಾಪ್ತಿಯ ಮತ್ತೊಬ್ಬ ಮಹಿಳೆ 8.75 ಲಕ್ಷ ಹಣ ಕಳಕೊಂಡಿದ್ದಾರೆ. ಷೇರು ಮೂಲಕ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಯೂಟ್ಯೂಬ್ ನಲ್ಲಿ ಬಂದ ಮಾಹಿತಿಯನ್ನು ಆಧರಿಸಿ ಮೊಬೈಲ್ ಪ್ಲೇ ಸ್ಟೋರ್ ನಲ್ಲಿ SMCTK App ಅನ್ನು ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದು, ಆಬಳಿಕ ತನ್ನ ಮೊಬೈಲ್ ವಿವರ ಮತ್ತು ಬ್ಯಾಂಕ್ ಖಾತೆ ನಮೂದಿಸಿದ್ದರು.
ಆನಂತರ ಮಹಿಳೆಯ ಮೊಬೈಲ್ ನಂಬರನ್ನು ಎಸ್ ಎಂಸಿ ಗ್ಲೋಬಲ್ ಸೆಕ್ಯುರಿಟೀಸ್, ಎಸ್ ಎಂಸಿ ಮಾರ್ಕೆಟ್ ವಾಚ್ ವಾಟ್ಸಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಅದರಲ್ಲಿ ಗ್ರೂಪ್ ಅಡ್ಮಿನ್ ಆಗಿರುವ ಅಜಯ್ ಗಾರ್ಗ್ ಎಂಬಾತ ತನ್ನನ್ನು ಕಂಪನಿ ಸಿಇಓ ಎಂದು ಪರಿಚಯಿಸಿ ವಾಟ್ಸಪ್ ಕರೆ ಮಾಡಿದ್ದ. ಅಲ್ಲದೆ, ತಮ್ಮ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಸಿಗುವುದಾಗಿ ನಂಬಿಸಿದ್ದಾನೆ.
ಆನಂತರ ಖಾಸಗಿಯಾಗಿ ಚಾಟಿಂಗ್ ಮಾಡುತ್ತ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದ. ಇದರಂತೆ, ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿದ್ದ ಎಸ್ಎಂಸಿಟಿಕೆ ಆಪ್ ನಲ್ಲಿ ಹಣ ಹೂಡಿಕೆ ಮಾಡಲು ಮುಂದಾಗಿದ್ದು ಆತ ನೀಡಿರುವ ಬ್ಯಾಂಕ್ ಖಾತೆಗಳಿಗೆ ಹಣವನ್ನು ರವಾನಿಸಿದ್ದಾರೆ. ಎರಡು ಬ್ಯಾಂಕ್ ಖಾತೆಗಳಿಗೆ 8,75000 ರುಪಾಯಿ ಹಣವನ್ನು ಹಂತ ಹಂತವಾಗಿ ನೆಫ್ಟ್ ಮೂಲಕ ಹಾಕಿದ್ದರು. ಆಬಳಿಕ ಏಪ್ ಅನ್ನು ಗಮನಿಸಿದಾಗ ತನ್ನ ಹಣ ದುಪ್ಪಟ್ಟು ಆಗಿರುವುದು ಕಂಡುಬಂದಿತ್ತು. ಅಲ್ಲದೆ, ಸ್ಪಷ್ಟವಾಗಿ 16,69,229 ರೂ. ಹಣ ಇರುವುದಾಗಿ ತೋರಿಸಿತ್ತು. ಈ ಹಣವನ್ನು ಹಿಂತಿರುಗಿ ಪಡೆಯಲು ಸಿಇಓ ಅಜಯ್ ಗಾರ್ಗ್ ಅವರನ್ನು ಮಹಿಳೆ ಸಂಪರ್ಕಿಸಿದ್ದಾರೆ.
ಆದರೆ ಲಾಭದ ಹಣವನ್ನು ಪಡೆಯಲು 1,97,307 ರೂ. ಹಣವನ್ನು ಟ್ಯಾಕ್ಸ್ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಹಣವನ್ನು ಕಟ್ಟಿದರೆ ಮಾತ್ರ ಲಾಭದ ಹಣ ಸಿಗುತ್ತದೆ ಎಂದು ಆತ ಹೇಳಿದ್ದಾನೆ. ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Mangalore kadri Woman looses 8.75 lakhs in fake stock market after watching fake youtube video on stock market. A case has been registered at the CEN police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm