ಬ್ರೇಕಿಂಗ್ ನ್ಯೂಸ್
02-01-25 11:00 pm HK News Desk ಕ್ರೈಂ
ಬೆಳಗಾವಿ, ಜ.2: ಕುಡಿತಕ್ಕಾಗಿ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರ ರೀತಿಯಲ್ಲಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ.
2024ರ ಡಿಸೆಂಬರ್ 10 ರಂದು ಘಟನೆ ನಡೆದಿದ್ದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಆರೋಪಿತ ಮಹಿಳೆ ಸಾವಿತ್ರಿ ಇಟ್ನಾಳೆ(30) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ವ್ಯಕ್ತಿ ಕುಡಿತದ ಚಟಕ್ಕೆ ಒಳಗಾಗಿದ್ದ. ಮನೆಯಲ್ಲಿ ಕುಡಿತಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿ ಸಾವಿತ್ರಿಯನ್ನು ನಿವೇಶನ ಮಾರಿ ಹಣ ಕೊಡುವಂತೆ ಶ್ರೀಮಂತ್ ಪೀಡಿಸುತ್ತಿದ್ದ. ಗಂಡನ ಕಿರುಕುಳ ತಾಳಲಾರದೇ ಮನೆಯ ಎದುರು ಕಟ್ಟೆಯ ಮೇಲೆ ಮಲಗಿದ್ದ ಶ್ರೀಮಂತನ ಕುತ್ತಿಗೆ ಹಿಸುಕಿ, ಪ್ರಜ್ಞೆ ತಪ್ಪಿದ ನಂತರ ಅವನ ದೇಹವನ್ನು ಹರಿತ ಆಯುಧದಿಂದ ಎರಡು ತುಂಡುಗಳನ್ನಾಗಿಸಿ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಒಬ್ಬಳಿಗೆ ಹೊರಗೆ ಸಾಗಿಸಲು ಆಗಲ್ಲ ಅಂತ ದೇಹವನ್ನ ತುಂಡರಿಸಿ ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿ ಕೃಷಿ ಜಮೀನಿಗೆ ಒಯ್ದು ಎಸೆದಿದ್ದಾಳೆ. ಕೆಲವು ದಿನಗಳ ಬಳಿಕ ಪಕ್ಕದ ತೋಟದವರು ಶವ ನೋಡಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆರೋಪಿ ಯಾರು ಎಂಬುದು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಡಿ.12 ರಂದು ಪ್ರಕರಣ ದಾಖಲಾಗಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣಕ್ಕೆ ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದು ಈಗ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A woman allegedly killed her husband following suspicion that he was planning to sexually assault their daughter, in Umrani village near Chikkodi in Belagavi district on Wednesday (January 1, 2025) night. Savitri Itnal (25) allegedly hacked Srimant Itnal (30) to death at their house. She used a rock to smash his head.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm