ಬ್ರೇಕಿಂಗ್ ನ್ಯೂಸ್
15-12-20 02:43 pm Bangalore Correspondent ಕ್ರೈಂ
ಬೆಂಗಳೂರು, ಡಿ.15: ದೇವರಿಗೆ ಕೈಮುಗಿಯುವ ನೆಪದಲ್ಲಿ ದೇವಸ್ಥಾನಕ್ಕೆ ಬಂದಿದ್ದ ಯುವಕನೊಬ್ಬ ದೇವರ ವಿಗ್ರಹವನ್ನೇ ಹೊತ್ತೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಚಿಕ್ಕಜಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿಕ್ಕಜಾಲ ಠಾಣೆ ವ್ಯಾಪ್ತಿಯ ಹುಣಸೆಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ದೇವಸ್ಥಾನದಲ್ಲಿದ್ದ ಪ್ರಾಚೀನ ಪಂಚಲೋಹದ ವಿಗ್ರಹ ಕಳವಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಾಚೀನ ಪಂಚಲೋಹದ ವಿಗ್ರಹಕ್ಕೆ ಕೋಟ್ಯಂತರ ರೂಪಾಯಿ ಬೆಲೆ ಇದ್ದು, ರೈಸ್ ಪುಲ್ಲಿಂಗ್ ಜಾಲದ ಖದೀಮರು ಇದನ್ನು ಕೋಟಿಗಟ್ಟಲೆ ದರಕ್ಕೆ ಮಾರುತ್ತಾರೆ. ಈ ಬಗ್ಗೆ ತಿಳಿದಿದ್ದ ರಘು ಎಂಬಾತ ಹುಣಸೆಮಾರನಹಳ್ಳಿಯ ಚಂದ್ರಮೌಳೇಶ್ವರನ ಮಠಕ್ಕೆ ಭಕ್ತನ ಸೋಗಿನಲ್ಲಿ ತೆರಳಿದ್ದ. ಮುಖ ಕಾಣದಂತೆ ಹೆಲ್ಮೆಟ್ ಧರಿಸಿಕೊಂಡೇ ಒಳಗೆ ನುಗ್ಗಿದ್ದ ಆರೋಪಿ, ಗರ್ಭಗುಡಿಗೆ ತೆರಳಿ ಅಲ್ಲಿಂದ ವಿಗ್ರಹವನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ. ಯಾರೂ ಇಲ್ಲದ ಸಂದರ್ಭ ಘಟನೆ ನಡೆದಿದ್ದು, ಸ್ಥಳೀಯರಿಗೆ ಗೊತ್ತಾಗದಂತೆ ಕೃತ್ಯ ನಡೆಸಿದ್ದ.

ನಾಲ್ಕು ಅಡಿ ಎತ್ತರದ ಚಂದ್ರಮೌಳೇಶ್ವರನ ವಿಗ್ರಹವಾಗಿದ್ದು, ಗರ್ಭಗುಡಿಯಿಂದ ಹೊರಗೊಯ್ದು ಬೈಕಿನಲ್ಲಿ ಪರಾರಿಯಾಗಿದ್ದ. ಹೀಗೆ ಎತ್ತಿಕೊಂಡು ಹೋಗುವುದು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಳವು ಕೃತ್ಯದ ಬಗ್ಗೆ ತಿಳಿದ ಮಠದ ಗುರು ನಂಜೇಶ್ವರ ಸ್ವಾಮೀಜಿ ಚಿಕ್ಕಜಾಲ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಆಧರಿಸಿ, ಬೆನ್ನತ್ತಿದ ಪೊಲೀಸರು ಆರೋಪಿಯನ್ನು ವಿಗ್ರಹ ಸಹಿತ ಬಂಧಿಸಿದ್ದಾರೆ. ಆರೋಪಿ ರಘು ರೈಸ್ ಪುಲ್ಲಿಂಗ್ ಜಾಲದ ಖದೀಮರಿಗೆ ಮಾರಾಟ ಮಾಡಲು ಯೋಜನೆ ಹಾಕಿದ್ದ. ಹೀಗಿರುವಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪುರಾತನ ವಿಗ್ರಹಗಳಿಗೆ ನಿಗೂಢ ಶಕ್ತಿ ಇರುತ್ತದೆ. ಇದಕ್ಕೆ ವಿದೇಶದಲ್ಲಿ ಕೋಟ್ಯಂತರ ಬೆಲೆಬಾಳುತ್ತದೆ ಎಂದು ಶ್ರೀಮಂತರನ್ನು ನಂಬಿಸಿ, ಹಣ ಪಡೆಯುವ ಜಾಲ ಇದೆ. ಇದಕ್ಕಾಗೇ ಆರೋಪಿ ರಘು ವಿಗ್ರಹವನ್ನು ಕದ್ದು ಮಾರಾಟ ಮಾಡಲು ಯೋಜನೆ ರೂಪಿಸಿದ್ದ. ಆದರೆ, ಸಿಸಿಟಿವಿಯ ಜಾಲ ಆತನ ಕೃತ್ಯವನ್ನು ಬಯಲು ಮಾಡಿದೆ.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm