ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm