ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am