ಬ್ರೇಕಿಂಗ್ ನ್ಯೂಸ್
09-01-25 10:43 pm Mangalore Correspondent ಕ್ರೈಂ
ಮಂಗಳೂರು, ಜ.9: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10.32 ಲಕ್ಷ ಹೂಡಿಕೆ ಮಾಡಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನು ಬೆನ್ನತ್ತಿದ ಮಂಗಳೂರು ಪೊಲೀಸರು ಕೇರಳದ ತ್ರಿಶ್ಶೂರ್ ಜಿಲ್ಲೆಯ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ವ್ಯಕ್ತಿಗೆ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಂತೆ ಹೇಳಿ ಮೆಸೇಜ್ ಬಂದಿತ್ತು. ಅದನ್ನು ನಂಬಿ ಅಪರಿಚಿತರು ಸೂಚಿಸಿದ ಮಾದರಿಯಲ್ಲಿ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದರು. ಒಟ್ಟು 10.32 ಲಕ್ಷ ರೂಪಾಯಿ ಹಣ ಹೂಡಿಕೆ ಮಾಡಿದ್ದು, ಆನಂತರ ಅದನ್ನು ಹಿಂದೆ ಪಡೆಯಲಾಗದೆ ಮೋಸ ಹೋಗಿದ್ದರು. ಕೃತ್ಯದ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ತಾನು ಹಣ ವರ್ಗಾವಣೆ ಮಾಡಿದ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ನೀಡಿದ್ದರು.
ಪೊಲೀಸರು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ, ಅದರಿಂದ ಯಾವೆಲ್ಲ ಖಾತೆಗಳಿಗೆ ಹಣ ರವಾನೆಯಾಗಿದೆ ಎಂದು ತನಿಖೆ ನಡೆಸಿದ್ದಾರೆ. ಈ ವೇಳೆ ತ್ರಿಶ್ಶೂರು ಜಿಲ್ಲೆಯ ಮಟ್ಟೂರು ಚೆಂಬುಚೀರ ನಿವಾಸಿ ನಿಧಿಶ್ ಕುಮಾರ್ ಎಂಬಾತನ ಖಾತೆಗೆ ಒಂದು ಲಕ್ಷ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸ್ನೇಹಿತನೊಬ್ಬ ತಿಳಿಸಿದಂತೆ ಬಂದಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಇದಕ್ಕಾಗಿ ಕಮಿಷನ್ ಹಣವನ್ನೂ ಪಡೆದಿದ್ದ. ಈ ಬಗ್ಗೆ ವಿಚಾರಣೆ ಸಲುವಾಗಿ ಮಂಗಳೂರು ಪೊಲೀಸರು ನಿಧಿಶ್ ನನ್ನು ವಶಕ್ಕೆ ಪಡೆದಿದ್ದಾರೆ. ಸೆನ್ ಠಾಣೆಯ ಎಸಿಪಿ ರವೀಶ್ ನಾಯ್ಕ್, ಪೊಲೀಸ್ ನಿರೀಕ್ಷಕ ಸತೀಶ್ ಎಂ. ಮತ್ತು ಪಿಎಸ್ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
Share marker scam 10.32 lakhs fraud, accused from thrissur arrested by Mangalore police.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am