ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm