ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm