ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm