ಬ್ರೇಕಿಂಗ್ ನ್ಯೂಸ್
11-01-25 10:21 pm Mangalore Correspondent ಕ್ರೈಂ
ಮಂಗಳೂರು, ಜ.11: ಪಾರ್ಟಿಯಲ್ಲಿ ಯುವತಿಗೆ ಅಮಲು ಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಮಂಗಳೂರು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ನಿವಾಸಿ ಬ್ರಿಯಾನ್ ರಿಚರ್ಡ್ ಅಮ್ಮನ್ನ (34) ಶಿಕ್ಷೆಗೊಳಗಾದ ವ್ಯಕ್ತಿ. ಸಂತ್ರಸ್ತ ಯುವತಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಇವರ ಗ್ರಾಹಕರು ಮತ್ತು ಸ್ನೇಹಿತರಾದ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಜಾಯ್ಲಿನ್ ಗ್ಲಾನೆಲ್ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಇದರ ನೆಪದಲ್ಲಿ 2021ರ ಫೆಬ್ರವರಿ 5ರಂದು ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೋಡಿಕಾಡು ಎಂಬಲ್ಲಿನ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು.
ಪಾರ್ಟಿಗೆ ಯುವತಿಯನ್ನೂ ಆಹ್ವಾನಿಸಿದ್ದು, ಜಾಯ್ಲಿನ್ ಅವರ ಸ್ನೇಹಿತನ ಕಾರಿನಲ್ಲಿ ಪುತ್ತೂರಿಗೆ ತೆರಳಿದ್ದರು. ಸ್ನೇಹಿತರು ಪಾರ್ಟಿಯಲ್ಲಿ ತೊಡಗಿದ್ದಾಗ ಯುವತಿಗೆ ವೈನ್ ಎಂದು ಕುಡಿಯಲು ಕೊಟ್ಟಿದ್ದರು. ಪಾರ್ಟಿ ಮಧ್ಯೆ ಜಾಯ್ಲಿನ್ ಸ್ನೇಹಿತ ಎಂದು ಆರೋಪಿ ಬ್ರಿಯಾನ್ ತನ್ನನ್ನು ಪರಿಚಯಿಸಿಕೊಂಡಿದ್ದ. ಪಾರ್ಟಿ ಮುಗಿದ ಬಳಿಕ ಎಲ್ಲರೂ ಗೆಸ್ಟ್ ಹೌಸ್ ರೂಮಿಗೆ ತೆರಳಿದ್ದರು. ಪಾರ್ಟಿ ಆಯೋಜಿಸಿದ್ದ ಜಾಯ್ಲಿನ್ ಮತ್ತು ರೆಬೆಕಾ ಎಂಬವರು ಯುವತಿ ಇದ್ದ ರೂಮಿನಲ್ಲೇ ಮಲಗಿದ್ದರು. ಅರ್ಧ ರಾತ್ರಿಯಲ್ಲಿ ಯುವತಿ ಎಚ್ಚರಗೊಂಡಾಗ ಜಾಯ್ಲಿನ್ ಮತ್ತು ರೆಬೆಕಾ ರೂಮಿನಲ್ಲಿ ಇರಲಿಲ್ಲ. ಈಕೆಯ ರೂಮಿನಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ ಬ್ರಿಯಾನ್ ರಿಚರ್ಡ್ ಅಲ್ಲಿಗೆ ಬಂದು ಯುವತಿ ಮೇಲೆ ಬಲವಂತದಿಂದ ಅತ್ಯಾಚಾರ ನಡೆಸಿದ್ದಾನೆ. ಯುವತಿ ಮರುದಿನ ಫೆ.6ರಂದು ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಳು.
ಯುವತಿಗೆ ತಿಳಿಯದಂತೆ ಆರೋಪಿ ಬ್ರಿಯಾನ್, ಕುಡಿಯಲು ಕೊಟ್ಟಿದ್ದ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿದ್ದ. ಅಮಲಿನಲ್ಲಿದ್ದಾಗ ಅತ್ಯಾಚಾರ ನಡೆಸಿದ್ದಾನೆ. ಪುತ್ತೂರು ಮಹಿಳಾ ಠಾಣೆ ನಿರೀಕ್ಷಕ ತಿಮ್ಮಪ್ಪ ನಾಯ್ಕ ದೋಷಾರೋಪ ಸಲ್ಲಿಸಿದ್ದರು. ಸಂತ್ರಸ್ತೆ ಪರವಾಗಿ 21 ಸಾಕ್ಷಿದಾರರು ಕೋರ್ಟಿನಲ್ಲಿ ಸಾಕ್ಷಿ ಹೇಳಿದ್ದು 37 ದಾಖಲೆಗಳನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ಆರೋಪ ಸಾಬೀತಾಗಿದ್ದರಿಂದ ತೀರ್ಪು ಪ್ರಕಟಿಸಿದ್ದು 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ.
The sixth additional District and Sessions Court has sentenced a man to ten years rigorous imprisonment for raping a young woman after spiking her drink at a party.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am