ಬ್ರೇಕಿಂಗ್ ನ್ಯೂಸ್
13-01-25 03:30 pm Mangaluru Correspondent ಕ್ರೈಂ
ಮಂಗಳೂರು, ಜ.13: ತಣ್ಣೀರುಬಾವಿ ಬಳಿಯ ಗಣೇಶ್ ಕಟ್ಟೆ ಎಂಬಲ್ಲಿ ಭಾನುವಾರ (ನಿನ್ನೆ) ರಾತ್ರಿ ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಾಂಜಾ ಮತ್ತು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಣಂಬೂರು ಠಾಣೆಯಲ್ಲಿ ಇತ್ತಂಡಗಳಿಂದ ದೂರು, ಪ್ರತಿದೂರು ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಗುಂಪುಗಳ ನಡುವೆ ಹೊಡೆದಾಟ ಆಗಿದೆಯೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಯತ್ನವೂ ನಡೆದಿದೆ.
ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿದ್ದಾಗ ಪ್ರೀತಂ ಮತ್ತು ಸನ್ವಿತ್ ಎಂಬವರು ಸ್ಥಳಕ್ಕೆ ಬಂದು ಸಿಗರ್ ಲೈಟ್ ಕೇಳಿದ್ದಾರೆ. ಪ್ರಜ್ವಲ್ ಸಿಗರ್ ಲೈಟ್ ನೀಡಿದ್ದು, ಹಿಂತಿರುಗಿ ನೀಡದೇ ಇದ್ದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರು ಪರಸ್ಪರ ಹೊಡೆದಾಡಿದ್ದಾರೆ. ಘಟನೆ ಸಂಬಂಧಿಸಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಒಬ್ಬನನ್ನು ಅಡ್ಮಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಾರ್ತಿಕ್ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದು, ಇತರ 4-5 ಜನರು ಸೇರಿ ಮರದ ದೊಣ್ಣೆಯಿಂದ ಪ್ರಜ್ವಲ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ. ಪ್ರೀತಂ ಎಂಬಾತ ನೀಡಿದ ದೂರಿನಂತೆ, ಪಣಂಬೂರು ಠಾಣೆಯಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಅವರನ್ನು ಆರೋಪಿಗಳೆಂದು ಹೇಳಿದ್ದು, ಈ ಪೈಕಿ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಯಾಗಿ ಪ್ರಜ್ವಲ್ ನೀಡಿದ ದೂರಿನಂತೆ, ಪ್ರೀತಂ ಮತ್ತು ಸನ್ವಿತ್ ಹಾಗೂ ಇತರರ ಮೇಲೆ ದೂರು ದಾಖಲಾಗಿದೆ.
ಸದ್ರಿ ಘಟನೆಗೆ ಸಂಬಂಧಿಸಿ ವಾಟ್ಸಪ್ ನಲ್ಲಿ ಬೆಂಗ್ರೆ ಪರಿಸರದಲ್ಲಿ ಹಿಂದುಗಳ ಮನೆಯನ್ನು ಗುರಿಯಾಗಿಸಿ ತಲವಾರು ಸಹಿತ ಮುಸ್ಲಿಮರು ನುಗ್ಗಿದ್ದು ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಾರಿಯಾಗುವ ಯತ್ನದಲ್ಲಿ ಒಬ್ಬನನ್ನು ಸ್ಥಳೀಯರು ಸೆರೆಹಿಡಿದಿದ್ದಾಗಿ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಣ್ಣೀರುಬಾವಿ, ಬೆಂಗ್ರೆ ಪರಿಸರದಲ್ಲಿ ಗಾಂಜಾ ವ್ಯಸನ ಜೋರಾಗಿದ್ದು, ಯುವಕರು ಹಗಲಿನಲ್ಲೇ ತೇಲಾಡುತ್ತ ಇರುತ್ತಾರೆ. ಎರಡು ದಿನಗಳಿಂದ ಬೀಚ್ ಉತ್ಸವ ಕಾರಣಕ್ಕೆ ಯುವಕರು ಜಾಲಿ ಮಾಡುತ್ತಿದ್ದರು. ಅದೇ ಗುಂಗಿನಲ್ಲಿ ಗಲಾಟೆ ಆಗಿರುವ ಸಾಧ್ಯತೆಯಿದೆ.
Mangalore Fight near Tannirbhavi beach Two cases filed for spreading communal rumours, four arrested. An altercation late on January 12 near Ganesh Katte, Tannirbhavi, under the jurisdiction of Panambur police station, escalated into a violent clash between two groups
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm