ಬ್ರೇಕಿಂಗ್ ನ್ಯೂಸ್
17-01-25 03:02 pm Mangaluru Correspondent ಕ್ರೈಂ
ಉಳ್ಳಾಲ, ಜ.17: ಮಟ ಮಟ ಮಧ್ಯಾಹ್ನವೇ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಬೀದರಿನಲ್ಲಿ ನಿನ್ನೆ ಎಟಿಎಂ ಹಣ ತುಂಬುವಾಗ ಗನ್ ಶೂಟ್ ಮಾಡಿದ ದರೋಡೆ ಬೆನ್ನಲ್ಲೇ ದಕ್ಷಿಣ ಕರ್ನಾಟಕದ ತುದಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಕಾರಿನಲ್ಲಿ ಬಂದ ಆಗಂತುಕರಲ್ಲಿ ಐವರು ಬ್ಯಾಂಕ್ ಶಾಖೆಗೆ ನುಗ್ಗಿದ್ದು ಕಚೇರಿಯಲ್ಲಿದ್ದ ಸಿಬ್ಬಂದಿಗಳಿಗೆ ಮಾರಕಾಯುಧಗಳನ್ನ ತೋರಿಸಿ ಸುಮಾರು ಹತ್ತು ಕೋಟಿಗೂ ಅಧಿಕ ಬೆಲೆಬಾಳುವ ಚಿನ್ನಾಭರಣ, ಸುಮಾರು ಐದು ಲಕ್ಷ ರೂಪಾಯಿ ನಗದನ್ನ ದರೋಡೆಗೈದು ಮಂಗಳೂರು ಕಡೆ ಕಾರಿನಲ್ಲಿ ಪರಾರಿಯಾಗಿದ್ದಾರೆ.
ಕೆ.ಸಿ ರೋಡ್ ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕಿನ ಕೆಳಗಿನ ಅಂತಸ್ತಿನ ಬೇಕರಿಯಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಬ್ಯಾಂಕಿನ ಸಿಬ್ಬಂದಿಗಳ ಬೊಬ್ಬೆ ಕೇಳಿ ಮೇಲೆ ಓಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗಂತುಕರು ಗನ್ ತೋರಿಸಿ ಬೆದರಿಸಿದ್ದಾರೆ.
ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.
Bank robbery in Kotekar Vyavasaaya Seva Sahakaari Bank, Armed gang robs gold, cash in daylight heist. A daring robbery was carried out in broad daylight at the Kotekar Cooperative Society Bank, K C Road branch, by a gang of five armed individuals.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am