ಬ್ರೇಕಿಂಗ್ ನ್ಯೂಸ್
20-01-25 07:19 pm Mangaluru Correspondent ಕ್ರೈಂ
ಮಂಗಳೂರು, ಜ.20: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗನ್ ಡಿ. ದೇವರ್(35), ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ. ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಕಾರು, ಎರಡು ಪಿಸ್ತೂಲ್, ಚೂರಿ ಮತ್ತು ಕಳವಾದ ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ ಮಹಜರು ಬಳಿಕ ತಿಳಿಯಬೇಕಾಗಿದೆ. ಕೋಟೆಕಾರು ಬ್ಯಾಂಕಿನಿಂದ ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ದರೋಡೆಯಾಗಿತ್ತು. ಮುಂಬೈ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಕಮಿಷನರ್ ಅಗರ್ವಾಲ್ ತಿಳಿಸಿದ್ದಾರೆ.








ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ತಂಡದಲ್ಲಿ ಇನ್ನೂ ಹಲವರಿದ್ದಾರೆ, ಬಂಧಿತರಿಂದ ಮಹಾರಾಷ್ಟ್ರ ಮೂಲದ ಕಾರನ್ನು ವಶಕ್ಕೆ ಪಡೆದಿದ್ದೇವೆ, ಚಿನ್ನ ಇರುವ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದಿದ್ದು ಚಿನ್ನದ ಮೌಲ್ಯದ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಸ್ಥಳೀಯರು ಕೂಡ ಭಾಗಿಯಾಗಿರುವ ಶಂಕೆಯಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ಬಂಧಿತ ಮೂವರು ಕೂಡ ಪ್ರಮುಖ ಆರೋಪಿಗಳೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ದರೋಡೆ ಕೃತ್ಯದ ಬಳಿಕ ಕೇರಳಕ್ಕೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಆನಂತರ, ಕೃತ್ಯಕ್ಕೆ ಬಳಸಿದ್ದ ಕಾರು ತಲಪಾಡಿ ಟೋಲ್ ಗೇಟ್ ನಲ್ಲಿ ಪಾಸ್ ಆಗಿರುವುದು ಪತ್ತೆಯಾಗಿತ್ತು. ಆದರೆ ಆ ಕಾರಿನಲ್ಲಿ ಚಾಲಕ ಬಿಟ್ಟರೆ ಬೇರಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಆರೋಪಿಗಳು ಆ ಕಾರು ಬಿಟ್ಟು ಬೇರೆ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಅಂತ ತೋರಿಸಿದ್ದು, ಪ್ರಕರಣದಲ್ಲಿ ನಾನಾ ರೀತಿಯ ಪ್ರಶ್ನೆಗಳು, ಅನುಮಾನಗಳು ಎದ್ದಿವೆ. ಇದಕ್ಕೆಲ್ಲ ಪೊಲೀಸರೇ ಉತ್ತರ ಕೊಡಬೇಕಾಗಿದೆ.
Mangalore Kotekar Bank Robbery, Three arrested from Tirunelveli in Tamil Nadu by Mangalore Police. Mangalore Kotekar Bank Robbery: Three arrested from Tirunelveli in Tamil Nadu by Mangalore Police. In a major bust, the Mangalore police have arrested three persons in connection to the Kotekar bank robbery. The arrested are identified as Murugandi Devar, Prakash Josuha, and Manivannan.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am