ಬ್ರೇಕಿಂಗ್ ನ್ಯೂಸ್
24-01-25 04:28 pm Udupi Correspondent ಕ್ರೈಂ
ಉಡುಪಿ, ಜ.24: ಸಾಲ ತೀರಿಸಿಲ್ಲ ಎಂಬ ಕೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಇನ್ನೊಬ್ಬ ಕಲಾವಿದ ಸೇರಿ ಮೂವರು ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಹಲ್ಲೆ ಮಾಡಿದವರು. ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ನಿತಿನ್ ಆಚಾರ್ಯ, ತನ್ನ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ ಬಳಿಯಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು. ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್ನನ್ನು ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳಿಗೆ ಹೊಡೆಯುವ ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನು, ಕಾಲಿಗೆ ಹೊಡೆದು ಕಾಲಿನಿಂದ ತುಳಿದು ಖಾಲಿ ಬಾಂಡ್ ಪೇಪರ್ಗೆ ಬಲಾತ್ಕಾರವಾಗಿ ಸಹಿ ಪಡೆದಿದ್ದಾರೆ. ಬಳಿಕ ಸಂಜೆಯ ವೇಳೆಗೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಬೆನ್ನಿಗೆ ಬಿದ್ದ ಏಟಿನ ಗಾಯದ ನಡುವೆಯೂ ಜನವರಿ 21ರ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ನರ್ತನ ಮಾಡಿದ್ದರು. ಜನವರಿ 22ರಂದು ಬೆಳಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered at the Padubidri police station after a Yakshagana artiste was physically assaulted by three individuals over an alleged failure to repay a loan. The victim, Nithin Kumar from Sasihitlu Mela, is a resident of Padubidri. The accused include Sachin Amin of Udyavara, his father Kushalanna, and another financier.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm