ಬ್ರೇಕಿಂಗ್ ನ್ಯೂಸ್
24-01-25 04:28 pm Udupi Correspondent ಕ್ರೈಂ
ಉಡುಪಿ, ಜ.24: ಸಾಲ ತೀರಿಸಿಲ್ಲ ಎಂಬ ಕೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಇನ್ನೊಬ್ಬ ಕಲಾವಿದ ಸೇರಿ ಮೂವರು ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಹಲ್ಲೆ ಮಾಡಿದವರು. ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ನಿತಿನ್ ಆಚಾರ್ಯ, ತನ್ನ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ ಬಳಿಯಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು. ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್ನನ್ನು ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳಿಗೆ ಹೊಡೆಯುವ ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನು, ಕಾಲಿಗೆ ಹೊಡೆದು ಕಾಲಿನಿಂದ ತುಳಿದು ಖಾಲಿ ಬಾಂಡ್ ಪೇಪರ್ಗೆ ಬಲಾತ್ಕಾರವಾಗಿ ಸಹಿ ಪಡೆದಿದ್ದಾರೆ. ಬಳಿಕ ಸಂಜೆಯ ವೇಳೆಗೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಬೆನ್ನಿಗೆ ಬಿದ್ದ ಏಟಿನ ಗಾಯದ ನಡುವೆಯೂ ಜನವರಿ 21ರ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ನರ್ತನ ಮಾಡಿದ್ದರು. ಜನವರಿ 22ರಂದು ಬೆಳಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered at the Padubidri police station after a Yakshagana artiste was physically assaulted by three individuals over an alleged failure to repay a loan. The victim, Nithin Kumar from Sasihitlu Mela, is a resident of Padubidri. The accused include Sachin Amin of Udyavara, his father Kushalanna, and another financier.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm