ಬ್ರೇಕಿಂಗ್ ನ್ಯೂಸ್
26-01-25 05:07 pm HK News Desk ಕ್ರೈಂ
ಕಾರವಾರ, ಜ 26: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2022ರಲ್ಲಿ ಅಂಕೋಲಾ ತಾಲೂಕಿನ 29 ವರ್ಷದ ವಿವಾಹಿತ ವ್ಯಕ್ತಿ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ತನ್ನ ತಾಯಿ ಕರೆದಿರುವುದಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ಬಾಲಕಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಂದಿನ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ ಅವರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಬಳಿಕ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 1 ವರ್ಷ ಜೈಲು ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದಿಸಿದ್ದರು.
ಅಂದಿನ ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ, ಪ್ರಕರಣದ ಮೇಲುಸ್ತುವಾರಿ ಅಧಿಕಾರಿ ಈಗಿನ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಮಠಪತಿ, ಎಎಸ್ಐ ಮಹಾಬಲೇಶ್ವರ ಗಡೇರ, ಸಹಾಯಕ ಗುರುರಾಜ ನಾಯ್ಕ ಪ್ರಕರಣದ ಸಾಕ್ಷಿಯಾಗಿ ಸಹಕರಿಸಿದ್ದರು.
Accused gets 20 years imprisonment for rape and cheating of marriage by Karwar court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm