ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.
ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm