ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am