ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm