ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 06:11 pm
Mangalore Correspondent
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm