ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.
ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm