ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.











ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm