ಬ್ರೇಕಿಂಗ್ ನ್ಯೂಸ್
18-02-25 06:04 pm HK News Desk ಕ್ರೈಂ
ಮಡಿಕೇರಿ, ಫೆ.18: ದುಬಾರಿ ಗಿಫ್ಟ್ ಆಮಿಷ ತೋರಿಸಿ ನಕಲಿ ಸ್ಕೀಮ್ ನಡೆಸುತ್ತಿದ್ದ ಮಂಗಳೂರು ಮೂಲದ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಇವರು ಎಸ್.ವಿ. ಸ್ಮಾರ್ಟ್ ವಿಶನ್ ಎಂಬ ಸ್ಕೀಮ್ ಹೆಸರಲ್ಲಿ ಥಾರ್ ಜೀಪು ಗೆಲ್ಲಬಹುದೆಂದು ಜನರನ್ನು ಯಾಮಾರಿಸಿ ಸಾವಿರಾರು ಮಂದಿಗೆ ವಂಚನೆ ಎಸಗಿರುವುದು ಪತ್ತೆಯಾಗಿದೆ.
ಸ್ಕೀಮ್ ನಡೆಸುತ್ತಿದ್ದ ಪ್ರಮುಖ ಆರೋಪಿ ಮಂಗಳೂರಿನ ಸುರತ್ಕಲ್ ನಿವಾಸಿ ಮೊಹಮ್ಮದ್ ಅಶ್ರಫ್ (37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ ಸುಲೇಮಾನ್(37), ತ್ಯಾಗರಾಜ ಕಾಲನಿಯ ಅಬ್ದುಲ್ ಗಫೂರ್ (34), ಮೊಹಮ್ಮದ್ ಅಕ್ರಮ್ (34) ಹಾಗೂ ಕುಂಬಳಕೇರಿ ನಿವಾಸಿ ಎಚ್.ಎನ್ ಕಿಶೋರ್ ಬಂಧಿತರು. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಎಸ್ಪಿ ಕೆ. ರಾಮರಾಜನ್ ಮಾಹಿತಿ ನೀಡಿದ್ದಾರೆ.


ಮಡಿಕೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜನವರಿ 30ರಿಂದ ಎಸ್.ವಿ ಸ್ಮಾರ್ಟ್ ವಿಶನ್ ಸ್ಕೀಂ ಹೆಸರಿನಲ್ಲಿ ಸಾರ್ವಜನಿಕರಿಂದ ತಿಂಗಳಿಗೆ ಒಂದು ಸಾವಿರದಂತೆ ಹಣ ಸಂಗ್ರಹಿಸುತ್ತಿದ್ದರು. ಈಗಾಗಲೇ 1100ಕ್ಕೂ ಹೆಚ್ಚು ಮಂದಿ ಸ್ಕೀಮಿಗೆ ಸೇರಿಕೊಂಡಿದ್ದು ಪ್ರತಿ ತಿಂಗಳು 1 ಸಾವಿರದಂತೆ 24 ಕಂತುಗಳನ್ನು ಗ್ರಾಹಕರು ಕಟ್ಟಬೇಕಾಗುತ್ತದೆ. ಪ್ರತಿ ತಿಂಗಳ 30ನೇ ದಿನಾಂಕದಂತೆ ಸಂಜೆ 5 ಗಂಟೆಗೆ ಲಕ್ಕಿ ಡ್ರಾ ಮಾಡಿ ಫಲಿತಾಂಶವನ್ನು ವಾಟ್ಸಪ್ ಗ್ರೂಪಿಗೆ ತಿಳಿಸುವುದಾಗಿ ಹೇಳುತ್ತಿದ್ದರು. ಬಹುಮಾನವನ್ನು 50-60 ದಿನಗಳಲ್ಲಿ ತಲುಪಿಸುವುದಾಗಿ ಗ್ರಾಹಕರಿಗೆ ಮಾಹಿತಿ ನೀಡುತ್ತಿದ್ದರು. 20 ತಿಂಗಳ ಲಕ್ಕಿ ಡ್ರಾನಲ್ಲಿ ಒಟ್ಟು 96 ಜನರಿಗೆ ದುಬಾರಿ ವಾಹನ, ಫ್ಲಾಟ್ ಗಿಫ್ಟ್ ನೀಡುವುದಾಗಿ ತಿಳಿಸಿ, ಜನರನ್ನು ಆಕರ್ಷಿಸುತ್ತಿದ್ದರು.
ಇಂತಹ ಸ್ಕೀಮ್ ಗಳನ್ನು ನಡೆಸುವವರು ಬ್ಯಾಂಕಿಂಗ್ ಸಹಿತ ವಿವಿಧ ಇಲಾಖೆಗಳ ಅನುಮತಿ ಮತ್ತು ಲೈಸನ್ಸ್ ಪಡೆದಿರಬೇಕು. ಆದಾಯ ತೆರಿಗೆ, ಜಿಎಸ್ಟಿ ಸಂಬಂಧಿಸಿ ದಾಖಲಾತಿ ಹೊಂದಿರಬೇಕು. ಆದರೆ ಆರೋಪಿಗಳು ಯಾವುದೇ ದಾಖಲೆ, ಪರವಾನಿಗೆ ಇಲ್ಲದೆ ಎಸ್.ವಿ ಸ್ಮಾರ್ಟ್ ವಿಶನ್ ಹೆಸರಲ್ಲಿ ಸ್ಕೀಮ್ ನಡೆಸುತ್ತಿದ್ದರು. ಮೊದಲನೇ ತಿಂಗಳ ಬಹುಮಾನವಾಗಿ ಒಬ್ಬರಿಗೆ ಥಾರ್ ಜೀಪು ಮತ್ತು ಎಂಟು ಜನರಿಗೆ ಬೈಕ್ ನೀಡಬೇಕಾಗಿತ್ತು. ಆದರೆ ಇವರು ಥಾರ್ ಜೀಪು ಬದಲಾಗಿ 7.60 ಲಕ್ಷ ರೂ. ಮತ್ತು 7 ಮಂದಿಗೆ 43 ಸಾವಿರ ರೂ. ಮೊತ್ತದ ಚೆಕ್ ನೀಡಿದ್ದರು. ನಕಲಿ ಸ್ಕೀಮ್ ಬಗ್ಗೆ ಪೊಲೀಸ್ ಗುಪ್ತದಳ ನೀಡಿದ ಮಾಹಿತಿ ಆಧರಿಸಿ ನಗರ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸ್ಕೀಮ್ ನಡೆಸುತ್ತಿದ್ದ ಕಚೇರಿಯಲ್ಲಿದ್ದ ಕಂಪ್ಯೂಟರ್ ಇನ್ನಿತರ ಉಪಕರಣಗಳನ್ನು ಜಪ್ತಿ ಮಾಡಿದ್ದಾರೆ.
Madikeri police have arrested three individuals from Mangalore in connection with a fraud scheme.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm