ಬ್ರೇಕಿಂಗ್ ನ್ಯೂಸ್
28-02-25 02:37 pm HK News Desk ಕ್ರೈಂ
ಭೋಪಾಲ್, ಫೆ.28: ಐದು ವರ್ಷದ ಹೆಣ್ಣು ಮಗುವನ್ನು 18 ವರ್ಷದ ಯುವಕನೊಬ್ಬ ಕ್ರೂರವಾಗಿ ಹಿಂಸಿಸಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಫೆ.22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯ ನಡೆಸಿದ ಹುಡುಗ ಪಕ್ಕದ ಮನೆಯಾತನೇ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನಿಗಿನ್ನೂ 18 ತುಂಬಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಟವಾಡುತ್ತಿದ್ದ ಹೆಣ್ಣು ಮಗುವನ್ನು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಟೆರೇಸಿಗೆ ಒಯ್ದು ಅಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯ ಮುಖ, ಎದೆ ಮತ್ತು ದೇಹದಲ್ಲಿಡೀ ಕಚ್ಚಿದ ಗುರುತುಗಳಿದ್ದು, ರಕ್ತದಿಂದ ತೋಯ್ದು ಹೋಗಿದ್ದಳು. ಮಗು ಅಳುತ್ತಿದ್ದಾಗ ತಲೆಯ ಭಾಗವನ್ನು ಗೋಡೆಗೆ ಬಡಿದು ಒತ್ತಿ ಹಿಡಿದಿದ್ದು, ಇದರಿಂದಾಗಿ ತೀವ್ರ ತೆರನಾದ ಗಾಯಗಳಾಗಿವೆ.
ಬಾಲಕಿ ಅಳುತ್ತಿದ್ದ ಶಬ್ದ ಕೇಳಿ ಇತರ ಮಕ್ಕಳು ಅಲ್ಲಿಗೆ ತೆರಳಿದಾಗ, ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವ ದೃಶ್ಯ ನೋಡಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ, ಹುಡುಗ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕೂಡಲೇ ಕೋಮಾ ಸ್ಥಿತಿಗೆ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ರಕ್ತಸ್ರಾವ ಮತ್ತು ತಲೆಗೆ ಬಿದ್ದ ಪೆಟ್ಟಿನಿಂದಾಗಿ ಬದುಕುವ ಸಾಧ್ಯತೆ ಬಗ್ಗೆ ವೈದ್ಯರು ಖಚಿತಪಡಿಸಿಲ್ಲ. ಬಾಲಕಿಯ ಸ್ಥಿತಿಯನ್ನು ನೋಡಿ ವೈದ್ಯರು ಕೂಡ ಶಾಕ್ ಆಗಿದ್ದಾರೆ. ಬಾಲಕಿ ಬೊಬ್ಬೆ ಹಾಕದಂತೆ ದೇಹಕ್ಕೆ ಬ್ಯಾಟರಿ ಶಾಕ್ ನೀಡಿದ್ದು ಈ ವೇಳೆ ಕೃತ್ಯ ಎಸಗಿದ್ದಾನೆ.
ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ನೂರಾರು ಜನರು, ಕಾಂಗ್ರೆಸ್, ಬಿಜೆಪಿ ನಾಯಕರು ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿದ್ದು, ಕ್ರೂರ ಹಿಂಸೆ ನೀಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
A five-year-old in Madhya Pradesh is battling for her life after a horrific sexual assault. Doctors at Gwalior's Kamala Raja Hospital said she needed 28 stitches in her private parts, and an operation for colostomy. The accused is a 17-year-old who has been arrested and is being tried as a juvenile, the police said.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm