ಬ್ರೇಕಿಂಗ್ ನ್ಯೂಸ್
28-02-25 02:37 pm HK News Desk ಕ್ರೈಂ
ಭೋಪಾಲ್, ಫೆ.28: ಐದು ವರ್ಷದ ಹೆಣ್ಣು ಮಗುವನ್ನು 18 ವರ್ಷದ ಯುವಕನೊಬ್ಬ ಕ್ರೂರವಾಗಿ ಹಿಂಸಿಸಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಫೆ.22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯ ನಡೆಸಿದ ಹುಡುಗ ಪಕ್ಕದ ಮನೆಯಾತನೇ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನಿಗಿನ್ನೂ 18 ತುಂಬಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಟವಾಡುತ್ತಿದ್ದ ಹೆಣ್ಣು ಮಗುವನ್ನು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಟೆರೇಸಿಗೆ ಒಯ್ದು ಅಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯ ಮುಖ, ಎದೆ ಮತ್ತು ದೇಹದಲ್ಲಿಡೀ ಕಚ್ಚಿದ ಗುರುತುಗಳಿದ್ದು, ರಕ್ತದಿಂದ ತೋಯ್ದು ಹೋಗಿದ್ದಳು. ಮಗು ಅಳುತ್ತಿದ್ದಾಗ ತಲೆಯ ಭಾಗವನ್ನು ಗೋಡೆಗೆ ಬಡಿದು ಒತ್ತಿ ಹಿಡಿದಿದ್ದು, ಇದರಿಂದಾಗಿ ತೀವ್ರ ತೆರನಾದ ಗಾಯಗಳಾಗಿವೆ.
ಬಾಲಕಿ ಅಳುತ್ತಿದ್ದ ಶಬ್ದ ಕೇಳಿ ಇತರ ಮಕ್ಕಳು ಅಲ್ಲಿಗೆ ತೆರಳಿದಾಗ, ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವ ದೃಶ್ಯ ನೋಡಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ, ಹುಡುಗ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕೂಡಲೇ ಕೋಮಾ ಸ್ಥಿತಿಗೆ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ರಕ್ತಸ್ರಾವ ಮತ್ತು ತಲೆಗೆ ಬಿದ್ದ ಪೆಟ್ಟಿನಿಂದಾಗಿ ಬದುಕುವ ಸಾಧ್ಯತೆ ಬಗ್ಗೆ ವೈದ್ಯರು ಖಚಿತಪಡಿಸಿಲ್ಲ. ಬಾಲಕಿಯ ಸ್ಥಿತಿಯನ್ನು ನೋಡಿ ವೈದ್ಯರು ಕೂಡ ಶಾಕ್ ಆಗಿದ್ದಾರೆ. ಬಾಲಕಿ ಬೊಬ್ಬೆ ಹಾಕದಂತೆ ದೇಹಕ್ಕೆ ಬ್ಯಾಟರಿ ಶಾಕ್ ನೀಡಿದ್ದು ಈ ವೇಳೆ ಕೃತ್ಯ ಎಸಗಿದ್ದಾನೆ.
ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ನೂರಾರು ಜನರು, ಕಾಂಗ್ರೆಸ್, ಬಿಜೆಪಿ ನಾಯಕರು ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿದ್ದು, ಕ್ರೂರ ಹಿಂಸೆ ನೀಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
A five-year-old in Madhya Pradesh is battling for her life after a horrific sexual assault. Doctors at Gwalior's Kamala Raja Hospital said she needed 28 stitches in her private parts, and an operation for colostomy. The accused is a 17-year-old who has been arrested and is being tried as a juvenile, the police said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am