ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm