ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm