ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm