ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm