ಬ್ರೇಕಿಂಗ್ ನ್ಯೂಸ್
07-03-25 05:51 pm HK News Desk ಕ್ರೈಂ
ಕಾಸರಗೋಡು, ಮಾ.7 : ಕಾಞಂಗಾಡು ಬಳಿಯ ಮಾವುಂಗಾಲ್ ಎಂಬಲ್ಲಿ ಕ್ರಶರ್ ಮ್ಯಾನೇಜರ್ ಗೆ ಬಂದೂಕು ತೋರಿಸಿ ಬೆದರಿಸಿ 10.20 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ನಡೆದಿದ್ದು, ಕೃತ್ಯದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಕೆಲವೇ ಗಂಟೆಗಳ ಅಂತರದಲ್ಲಿ ಕಾಸರಗೋಡು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಿಹಾರ ಮೂಲದ ಮಹಮ್ಮದ್ ಇಬ್ರಾನ್ ಆಲಂ (21), ಮಹಮ್ಮದ್ ಮಲಿಕ್ (21), ಮಹಮ್ಮದ್ ಫಾರೂಕ್ (30) ಮತ್ತು ಅಸ್ಸಾಂ ಮೂಲದ ಧನಂಜಯ್ ಬೋರಾ (22) ಬಂಧಿತರಾಗಿದ್ದು, ದರೋಡೆಗೈದ ನಗದು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾಸರಗೋಡು ಎಸ್ಪಿ ಡಿ. ಶಿಲ್ಪಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬುಧವಾರ ಸಂಜೆ ಕಾಞಂಗಾಡು ಕಲ್ಯಾಣ್ ರಸ್ತೆಯ ಜಾಸ್ ಗ್ರಾನೈಟ್ ಅಗ್ರಿಗೇಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸ್ಟಾಕ್ ಯಾರ್ಡ್ ಮ್ಯಾನೇಜರ್ ಪಿಪಿ ರವೀಂದ್ರನ್ ಎಂಬವರಿಗೆ ಬಂದೂಕು ತೋರಿಸಿ ಅವರ ಕೈಯಲ್ಲಿದ್ದ ನಗದು ಹಣವನ್ನು ದರೋಡೆ ಮಾಡಲಾಗಿತ್ತು. ಸಂಜೆಯಾಗುತ್ತಲೇ ಕ್ರಶರ್ ಕಡೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಇದರ ಬಗ್ಗೆ ತಿಳಿದಿದ್ದ ತಂಡವೊಂದು ಕಾರನ್ನು ಅಡ್ಡಗಟ್ಟಿ ಹಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿತ್ತು. 10.20 ಲಕ್ಷ ರೂ. ನಗದು ಹಾಗೂ ರವೀಂದ್ರನ್ ಕೈಯಲ್ಲಿದ್ದ ಮೊಬೈಲನ್ನು ಲೂಟಿ ಮಾಡಲಾಗಿತ್ತು. ಈ ಬಗ್ಗೆ ಕೂಡಲೇ ರವೀಂದ್ರನ್ ಅವರು ಕಂಪನಿ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಹೊಸದುರ್ಗ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಕಡೆಗೂ ಪೊಲೀಸರಿಗೆ ಅಲರ್ಟ್ ಮಾಹಿತಿ ನೀಡಲಾಗಿತ್ತು.
ಆರೋಪಿಗಳು ಪ್ರಯಾಣಿಸಿದ್ದ ಕಾರು ತೆಲಂಗಾಣ ನೋಂದಣಿ ಹೊಂದಿರುವುದು ಮತ್ತು ಆ ವಾಹನವನ್ನು ಕೋಜಿಕ್ಕೋಡ್ ಮೂಲದವರಿಗೆ ಬಾಡಿಗೆ ನೀಡಲಾಗಿತ್ತು ಎನ್ನುವುದು ತಿಳಿದುಬಂದಿತ್ತು. ಜಿಪಿಎಸ್ ಮೂಲಕ ಅದರ ಮಾಲೀಕರು ಸರ್ಚ್ ಮಾಡಿದಾಗ, ವಾಹನ ಕಾಞಂಗಾಡ್ ರೈಲು ನಿಲ್ದಾಣದ ಬಳಿ ನಿಂತಿತ್ತು. ಕೂಡಲೇ ಪೊಲೀಸರು ಅಲ್ಲಿ ತಲುಪುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಅಲ್ಲಿನ ಸಿಸಿಟಿವಿಯಲ್ಲಿ ಆರೋಪಿಗಳು ಮಂಗಳೂರಿನತ್ತ ತೆರಳಿದ ರೈಲಿನಲ್ಲಿ ಹೋಗಿರುವುದು ಪತ್ತೆಯಾಗಿತ್ತು. ಕಾಸರಗೋಡು ಎಸ್ಪಿ ಶಿಲ್ಪಾ ಅವರ ಸೂಚನೆಯಂತೆ ಮಂಗಳೂರಿನ ಪೊಲೀಸರು ರೈಲು ನಿಲ್ದಾಣದಲ್ಲಿ ಶಂಕಿತ ಮೂವರನ್ನು ವಶಕ್ಕೆ ಪಡೆದಿದ್ದರು.
ಆನಂತರ, ಬುಧವಾರ ರಾತ್ರಿಯೇ ಹೊಸದುರ್ಗ ಪೊಲೀಸರು ಮಂಗಳೂರಿಗೆ ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕನೇ ಆರೋಪಿ ಅಸ್ಸಾಂ ಮೂಲದ ಧನಂಜಯ್ ಬೋರಾನನ್ನು ಆನಂತರ ಮಂಗಳೂರಿನಲ್ಲಿಯೇ ಬಂಧಿಸಲಾಗಿದೆ. ದೂರು ಬಂದ ಕೂಡಲೇ ಪೊಲೀಸರು ಎಲ್ಲ ಕಡೆ ಅಲರ್ಟ್ ಆಗಿದ್ದಲ್ಲದೆ, ಕಾರನ್ನು ಟ್ರೇಸ್ ಮಾಡಿ ಬೆನ್ನತ್ತಿದ್ದರಿಂದ ಆರೋಪಿಗಳನ್ನು ಸುಲಭದಲ್ಲಿ ಬಲೆಗೆ ಕೆಡವಲು ಸಾಧ್ಯವಾಗಿದೆ. ಕಾಞಂಗಾಡು ಡಿವೈಎಸ್ಪಿ ಬಾಬು ಪೆರಿಂಜೋತ್, ಹೊಸದುರ್ಗ ಇನ್ಸ್ ಪೆಕ್ಟರ್ ಪಿ.ಅಜಿತ್ ಕುಮಾರ್, ಎಸ್ಐಗಳಾದ ಅಖಿಲ್, ಜೋಜೊ ಮತ್ತು ಅಪರಾಧ ವಿಭಾಗದ ಪೊಲೀಸರಾದ ಶೈಜು ಮೋಹನ್, ಸನೋಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
The police have arrested four individuals in connection with the alleged armed robbery of ₹10.20 lakh from a crusher manager at Mavungala, Kanhangad, Kasaragod, on Thursday (March 6). The arrested suspects are Bihar natives Muhammed Ebron Alam, 21, Muhammed Malik, 21, and Muhammad Farooq, 30, and Assam native Dhananjan Bora, 22.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm