ಬ್ರೇಕಿಂಗ್ ನ್ಯೂಸ್
08-03-25 10:44 pm HK News Desk ಕ್ರೈಂ
ಕೊಪ್ಪಳ, ಮಾ.8 : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯ ವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯೊಬ್ಬರ ಮೇಲೆ ಮೂರು ಜನರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಲ್ಲದೆ ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂವರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.

ಈ ಮಧ್ಯೆ, ಇಬ್ಬರು ಮಹಿಳಾ ಸಂತ್ರಸ್ತರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಗಂಗಾವತಿ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತರು. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಪೆಟ್ರೋಲ್ ಗೆ ಹಣ ಕೊಡಲಿಲ್ಲವೆಂದು ಅತ್ಯಾಚಾರ
ದುಷ್ಕರ್ಮಿಗಳು ಮದ್ಯ ಸೇವಿಸಿದ ನಂತರ ತಮ್ಮ ದ್ವಿಚಕ್ರ ವಾಹನದಲ್ಲಿ ಸುತ್ತುವ ಅಭ್ಯಾಸವನ್ನು ಹೊಂದಿದ್ದರು. ಇದೇ ರೀತಿ ಗುರುವಾರ ಸವಾರಿಯಲ್ಲಿದ್ದಾಗ ಪ್ರವಾಸಿಗರ ಗುಂಪನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೊದಲು ಅವರು ಪೆಟ್ರೋಲ್ ಬಂಕ್ ಕುರಿತು ವಿಚಾರಿಸಿದ್ದು, ಈ ವೇಳೆ ಪೆಟ್ರೋಲ್ ಗೆ ಹಣ ನೀಡು ಎಂದು ಕೇಳಿದ್ದಾರೆ. ಪ್ರವಾಸಿಗರು ಹಣ ನೀಡಲಿಲ್ಲ ಎಂದು ಜಗಳ ತೆಗೆದಿದ್ದಾರೆ. ಬಳಿಕ ಅಲ್ಲಿದ್ದ ಪುರುಷರನ್ನು ಹೊಡೆದು ಅವರನ್ನು ನಾಲೆಗೆ ತಳ್ಳಿದ್ದಾರೆ. ನಂತರ ಇಸ್ರೇಲಿ ಮೂಲದ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲೆಗೆ ಬಿದ್ದ ಮೂವರು ಪುರುಷರ ಪೈಕಿ ಇಬ್ಬರು ಈಜಿ ಜೀವ ಉಳಿಸಿಕೊಂಡಿದ್ದರೆ, ಓರ್ವ ಒಡಿಶಾ ಮೂಲದ ಪ್ರವಾಸಿಗರು ಈಜಲು ಬಾರದೇ ಸಾವನ್ನಪ್ಪಿದ್ದಾನೆ.
Koppal police arrested two men on Saturday in connection with the gang-rape of a 27-year-old Israeli tourist and a 29-year-old homestay operator near Sanapur Lake, close to the Unesco World Heritage Site of Hampi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am