ಬ್ರೇಕಿಂಗ್ ನ್ಯೂಸ್
10-03-25 10:48 pm HK News Desk ಕ್ರೈಂ
ಪಾಟ್ನಾ, ಮಾ.10 : ಬಿಹಾರದ ಭೋಜ್ಪುರ ಜಿಲ್ಲೆಯ ಗೋಪಾಲ್ ಚೌಕ್ನಲ್ಲಿ ಫಿಲ್ಮೀ ಶೈಲಿಯಲ್ಲಿ ಜುವೆಲ್ಲರಿಯನ್ನು ದರೋಡೆ ಮಾಡಲಾಗಿದೆ. ಏಳು ಮಂದಿ ದರೋಡೆಕೋರರು ಆಭರಣ ಮಳಿಗೆಗೆ ನುಗ್ಗಿ ಗನ್ ತೊಕರಿಸಿ ಕೇವಲ ಎಂಟು ನಿಮಿಷಗಳಲ್ಲಿ ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಸೋಮವಾರ ಬೆಳಗ್ಗೆ 10.30ರ ವೇಳೆಗೆ ತನಿಷ್ಕ್ ಆಭರಣ ಶೋರೂಮ್ ಓಪನ್ ಆದ ಕೆಲ ಹೊತ್ತಿನಲ್ಲೇ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ಅಲ್ಲಿದ್ದ ಗ್ರಾಹಕರು ಮತ್ತು ಸಿಬಂದಿಯನ್ನು ಕೈ ಮೇಲೆತ್ತುವಂತೆ ಆರ್ಡರ್ ಮಾಡಿದ್ದಾರೆ. ಬಳಿಕ ಎದುರಿದ್ದ ಚಿನ್ನದ ಆಭರಣಗಳನ್ನು ಕಿತ್ತುಕೊಂಡಿದ್ದು ಕೈಗೆ ಸಿಕ್ಕ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಆಭರಣ ಮಳಿಗೆಯಲ್ಲಿದ್ದವರನ್ನು ಗನ್ ಪಾಯಿಂಟ್ನಲ್ಲಿ ಬೆದರಿಸಿ ಚಿನ್ನವನ್ನು ಲೂಟಿ ಮಾಡಿದ್ದಾರೆ.
ದರೋಡೆ ವೇಳೆ ಕುಳಿತ ಸ್ಥಾನದಿಂದ ಎದ್ದು ಬಂದ ಮ್ಯಾನೇಜರ್ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ. 8 ನಿಮಿಷದಲ್ಲಿ ಚಿನ್ನಾಭರಣ ಸೇರಿ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ದರೋಡೆಕೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಲ್ಲಾ ಮುಗಿದ ಮೇಲೆ ಎಂದಿನಂತೆ ಪೊಲೀಸರು ಎಂಟ್ರಿ ಕೊಟ್ಟು ತನಿಖೆ ನಡೆಸಿದ್ದಾರೆ. ಚೇಸ್ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಈ ಕುರಿತು ಮಾತನಾಡಿರುವ ಶೋರೂಂ ಮ್ಯಾನೇಜರ್ ಕುಮಾರ್ ಮೃತ್ಯುಂಜಯ್, ಕಳ್ಳರು ನಗದು ಜೊತೆಗೆ ಚಿನ್ನದ ಸರಗಳು, ನೆಕ್ಲೇಸ್ಗಳು, ಬಳೆ ಮತ್ತು ಕೆಲವು ವಜ್ರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ತಿಳಿಸಿದ್ದಾರೆ.
ಕಾರಿನಲ್ಲಿ ಐದಾರು ಮಂದಿ ಬಂದಿದ್ದು ಶೋರೂಮ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಏಕಕಾಲದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಒಳಹೋಗಲು ಅವಕಾಶ ಇಲ್ಲದ ಕಾರಣ ಅಡ್ಡಿ ಪಡಿಸಿದಾಗ, ಗನ್ ತೋರಿಸಿ ಬೆದರಿಸಿದ್ದಾರೆ. ಆಬಳಿಕ ಚಿನ್ನಾಭರಣ ದೋಚಿದ್ದಾರೆ ಎಂದು ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ.
The heist, which was captured on CCTV inside the showroom, took place at the Gopali Chowk branch, located in the Arrah police station area.According to showroom manager Kumar Mrityunjay, in addition to cash, the robbers took away a range of valuables, including gold chains, necklaces, bangles and some diamonds.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm