ಬ್ರೇಕಿಂಗ್ ನ್ಯೂಸ್
11-03-25 07:34 pm Bangalore Correspondent ಕ್ರೈಂ
ಬೆಂಗಳೂರು, ಮಾ.11 : ನಾಲ್ಕು ತಿಂಗಳ ಹಿಂದೆ ದಾಖಲಾಗಿದ್ದ ಒಂಟಿ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ಮಹಿಳೆಯ ಮೃತದೇಹ ಮತ್ತು ಆಕೆಯನ್ನು ಕೊಂದು ಶವ ಎಸೆದಿದ್ದ ಆರೋಪಿಯನ್ನೂ ಬಂಧಿಸಿದ್ದಾರೆ.
2024 ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್ ವಸತಿ ಪ್ರದೇಶದಿಂದ ಮೇರಿ (59) ಎಂಬ ಮಧ್ಯವಯಸ್ಕ ಮಹಿಳೆ ಕಾಣೆಯಾಗಿದ್ದರು. ಪೊಲೀಸರು ಆಕೆಯ ಪತ್ತೆಗಾಗಿ ಹುಡುಕಾಟ ನಡೆಸಿದ್ದರೂ, ಸರಿಯಾದ ಸುಳಿವು ಸಿಕ್ಕಿರಲಿಲ್ಲ. ಇದೀಗ ಮಾರ್ಚ್ 9ರಂದು ಬಾಗಲೂರಿನ ಹೊಸೂರು ಬಂಡೆ ಬಳಿ ಮಹಿಳೆಯ ಶವ ಪತ್ತೆ ಮಾಡಲಾಗಿದೆ. ಮಹಿಳೆಯ ಮೈಲಿದ್ದ ಚಿನ್ನಕ್ಕಾಗಿ ಆಕೆಯನ್ನು ಹತ್ಯೆಗೈದಿದ್ದ ಲಕ್ಷ್ಮಣ್ ಎಂಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಮೇರಿ ವಾಸವಿದ್ದ ಪ್ರದೇಶದಲ್ಲಿಯೇ ಲಕ್ಷ್ಮಣ್ ಕೂಡ ವಾಸವಿದ್ದ. ವಾಟರ್ ಮ್ಯಾನ್ ಹಾಗೂ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಣ್, ಮೇರಿ ಜೊತೆಗೆ ಪರಿಚಯವಿತ್ತು. 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಆರೋಪಿ ಲಕ್ಷ್ಮಣ್, ಮೇರಿಯ ಬಳಿಯಿದ್ದ 50 ಗ್ರಾಂ ಚಿನ್ನಾಭರಣದ ಆಸೆಗೆ ನವೆಂಬರ್ 25ರಂದು ಹತ್ಯೆಗೈಯ್ಯಲು ಯೋಜನೆ ರೂಪಿಸಿದ್ದ. ಮೇರಿಯ ಮನೆಯ ವಿದ್ಯುತ್ ಸಂಪರ್ಕ ಕತ್ತರಿಸಿದರೆ, ಸರಿ ಮಾಡಲು ತನ್ನನ್ನೇ ಕರೆಯುತ್ತಾರೆಂದು ಪ್ಲಾನ್ ಹಾಕಿದ್ದ. ಆದರೆ ವಿದ್ಯುತ್ ಸಂಪರ್ಕ ಕತ್ತರಿಸಿದರೂ ಮೇರಿ ಲಕ್ಷ್ಮಣ್ನನ್ನ ಸಹಾಯಕ್ಕೆ ಕರೆದಿರಲಿಲ್ಲ. ಆದರೆ ಲಕ್ಷ್ಮಣ್ ಆಕೆಯ ಮನೆಗೆ ಬಂದು ನವೆಂಬರ್ 26ರಂದು ಹತ್ಯೆಗೈದಿದ್ದು ಬಳಿಕ ಆಟೋದಲ್ಲಿ ಮೇರಿಯ ಶವ ಕೊಂಡೊಯ್ದು ಬಾಗಲೂರು ಸಮೀಪದ ಹೊಸೂರು ಬಂಡೆಯ ಕಸ ಡಂಪಿಂಗ್ ಯಾರ್ಡ್ನಲ್ಲಿ ಎಸೆದಿದ್ದ. ಬಳಿಕ ಲಕ್ಷ್ಮಣ್ ಸಹ ನಾಪತ್ತೆಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಪೊಲೀಸರ ದಾರಿ ತಪ್ಪಿಸಲು ಪ್ಲ್ಯಾನ್
ಮೃತದೇಹ ಎಸೆದ ಲಕ್ಷ್ಮಣ್, ಬಳಿಕ ಮೇರಿಯ ಮೊಬೈಲ್ ಆನ್ ಮಾಡಿ ಕಸ ಸಂಗ್ರಹಿಸುವ ಆಟೋದಲ್ಲಿ ಎಸೆದಿದ್ದ. ಅದೇ ರೀತಿ ತಾನು ಬಳಸುತ್ತಿದ್ದ ಒಟ್ಟು 4 ಸಿಮ್ ಕಾರ್ಡ್ಗಳ ಪೈಕಿ 3 ಸಿಮ್ ಕಾರ್ಡ್ಗಳಿರುವ ಫೋನ್ಗಳನ್ನ ನವೆಂಬರ್ 26ರಂದೇ ಡಿ.ಜೆ ಹಳ್ಳಿಯಲ್ಲಿರುವ ತನ್ನ ಪತ್ನಿಯ ಮನೆಯಲ್ಲಿಟ್ಟಿದ್ದ. ಇತ್ತ ಮೇರಿಯ ನಾಪತ್ತೆ ಪ್ರಕರಣದ ತನಿಖೆ ಆರಂಭಿಸಿದ್ದ ಕೊತ್ತನೂರು ಠಾಣೆ ಪೊಲೀಸರು, ಮಹಿಳೆಯ ಪರಿಚಯದಲ್ಲಿದ್ದ ಲಕ್ಷ್ಮಣ್ ಫೋನ್ ಕರೆ ವಿವರ, ಟವರ್ ಲೊಕೇಷನ್ ಪರಿಶೀಲಿಸಿದ್ದರು. ಅದರ ಪ್ರಕಾರ ಮೇರಿ ಕಾಣೆಯಾಗಿದ್ದ ದಿನ (ನವೆಂಬರ್ 26) ಆತನ ಲೊಕೇಶನ್ ಡಿ.ಜೆ ಹಳ್ಳಿಯಲ್ಲಿತ್ತು. ಹಾಗಾಗಿ ಪೊಲೀಸರಿಗೆ ಲಕ್ಷ್ಮಣ್ ಮೇಲೆ ಹೆಚ್ಚು ಅನುಮಾನ ಮೂಡಿರಲಿಲ್ಲ. ಆದರೂ ಸಹ ನಾಪತ್ತೆಯಾಗಿದ್ದ ಲಕ್ಷ್ಮಣ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಇತ್ತೀಚೆಗೆ ಸ್ನೇಹಿತೆಯೊಬ್ಬಳಿಗೆ ಕರೆ ಮಾಡಿದಾಗ ಲಕ್ಷ್ಮಣ್ ಮತ್ತೊಂದು ಸಿಮ್ ಸಕ್ರಿಯ ಇರುವುದು ಪತ್ತೆಯಾಗಿತ್ತು. ತಕ್ಷಣ ಆತನನ್ನ ಪತ್ತೆಹಚ್ಚಿದ ಪೊಲೀಸರು, ಕರೆತಂದು ವಿಚಾರಿಸಿದಾಗ ಹತ್ಯೆ ವಿಚಾರ ಬಯಲಾಗಿದೆ.
Kothanur Police crack case of 40 year old women body found at dumping yard in hennur, auto driver arrested. The deceased mary was murdered for 50 grams of gold and later was thrown at a dumping yard near hennur. The arrested has been identified as lakshman
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm