ಬ್ರೇಕಿಂಗ್ ನ್ಯೂಸ್
20-03-25 04:13 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಗೂಗಲ್ ನಲ್ಲಿ ಪೇಯಿಂಗ್ ಗೆಸ್ಟ್ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದಕ್ಕೆ ಪಿಜಿ ಮಾಲೀಕ ಮತ್ತು ಆತನ ಪಟಾಲಂ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿರುವ ಕಲಬುರಗಿ ಜಿಲ್ಲೆಯ ಮೂಲದ ವಿಕಾಸ್ (18) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಮಾರ್ಚ್ 17ರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದು, ಕದ್ರಿ ದೇವಸ್ಥಾನದ ಬಳಿಯ ಕುಕ್ಕೆಶ್ರೀ ಬಾಯ್ಸ್ ಪಿಜಿ ವಿರುದ್ಧ ಯುವಕ ಕದ್ರಿ ಠಾಣೆಗೆ ದೂರು ನೀಡಿದ್ದಾನೆ.
ವಿಕಾಸ್ ಕಳೆದ ಆರು ತಿಂಗಳಿನಿಂದ ಅದೇ ಪಿಜಿಯಲ್ಲಿದ್ದು, ಊಟದಲ್ಲಿ ಹುಳ ಬಿದ್ದಿರುವುದು, ಕ್ಲೀನ ಇಲ್ಲದಿರುವುದು, ಅತಿ ಕೆಟ್ಟ ಶೌಚಾಲಯ ಇದ್ದುದರಿಂದ ಬೇಸತ್ತು ಬೇರೆ ಪಿಜಿಗೆ ಹೋಗಿದ್ದ. ಈ ಬಗ್ಗೆ ಗೂಗಲ್ ನಲ್ಲಿ ಕುಕ್ಕೆಶ್ರೀ ಪಿಜಿ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಏನೂ ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದ. ಇದನ್ನು ಗಮನಿಸಿದ ಪಿಜಿ ಮಾಲೀಕ ಸಂತೋಷ್ ಎಂಬಾತ, ಕಮೆಂಟ್ ಡಿಲೀಟ್ ಮಾಡುವಂತೆ ಬೆದರಿಕೆ ಹಾಕಿದ್ದ. ಅಳಿಸಿ ಹಾಕದೇ ಇದ್ದುದಕ್ಕೆ ಸಂತೋಷ್ ಮತ್ತು ಆತನ ಪಟಾಲಂ ಸೇರಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದರೂ ಕೈಯಿಂದ ಹಲ್ಲೆ ಮಾಡಿದ್ದು ತೊಂದರೆ ಇಲ್ಲ ಎಂದು ಹೇಳಿ ಎಫ್ಐಆರ್ ಮಾಡಿಲ್ವಂತೆ. ಪೊಲೀಸರು ದೂರು ಪಡೆದು ಹಿಂದಕ್ಕೆ ಕಳಿಸಿದ್ದಾರೆ.
ವಿದ್ಯಾರ್ಥಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾವು ಪೊಲೀಸ್ ದೂರು ಕೊಟ್ಟಿದ್ದೇವೆ, ಆದರೆ ಕೈಯಲ್ಲಿ ಹಲ್ಲೆ ಮಾಡಿದ್ದಕ್ಕೆ ಕಂಪ್ಲೇಂಟ್ ರಿಜಿಸ್ಟರ್ ಮಾಡೋದಿಲ್ಲ ಎಂದಿದ್ದಾರೆ. ನಮಗೇನೂ ಗೊತ್ತಿರಲಿಲ್ಲ. ವಿದ್ಯಾರ್ಥಿ ಸಂಘಟನೆಯವರದ್ದೂ ಪರಿಚಯ ಇಲ್ಲ. ಅಲ್ಲಿ ಪಿಜಿ ಏನೂ ಚೆನ್ನಾಗಿಲ್ಲ. ನಾನೂ ಅಲ್ಲಿದ್ದೆ. ಹಾಗಾಗಿ ಕಮೆಂಟ್ ಹಾಕಿದ್ದೆ. ಅದಕ್ಕೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾನೆ. ಅಲ್ಲಿನ ಪಿಜಿಯ ವ್ಯವಸ್ಥೆ ಎಷ್ಟು ಕ್ಲೀನ್ ಇದೆಯೆಂದು ವಿದ್ಯಾರ್ಥಿ ತನ್ನಲ್ಲಿದ್ದ ಫೋಟೋಗಳನ್ನು ಮಾಧ್ಯಮಕ್ಕೆ ನೀಡಿದ್ದು ವಾಸ್ತವ ಸ್ಥಿತಿ ತೋರಿಸುತ್ತಿದೆ.
Engineering Student Attacked After Posting Negative Google Review About PG at kadri, Complaint Filed Against Owner in Mangalore.An engineering student, Vikas (18), hailing from Kalaburagi district, has been assaulted following his negative review about a paying guest (PG) accommodation in Mangalore. The incident took place on the night of March 17, around 10:30 PM, near the Kadri Temple, where Vikas lodged a complaint at the Kadri police station against the operator of the PG named Kukeshree Boys PG.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm