ಬ್ರೇಕಿಂಗ್ ನ್ಯೂಸ್
22-03-25 10:51 pm Mangalore Correspondent ಕ್ರೈಂ
ಮಂಗಳೂರು, ಮಾ.22 : ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಮ್ ಏಪ್ ನಲ್ಲಿ ಪರಿಚಯವಾಗಿದ್ದ ಮಹಿಳೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆ ಮಾಡಿಸಿದ್ದು, ಮಂಗಳೂರು ಮೂಲದ ದುಬೈ ಉದ್ಯೋಗಿ ಬರೋಬ್ಬರಿ 76 ಲಕ್ಷ ರೂಪಾಯಿ ಕಳಕೊಂಡು ಮೋಸ ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ವರ್ಷದ ಮಂಗಳೂರಿನ ವ್ಯಕ್ತಿ ದುಬೈನಲ್ಲಿ 18 ವರ್ಷಗಳಿಂದ ಪೆಟ್ರೋಲಿಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆರು ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಈ ವೇಳೆ, ಕಳೆದ ಡಿಸೆಂಬರ್ 12ರಂದು ಸಾಗರಿಕ ಅಗರ್ವಾಲ್ ಎಂದು ಪರಿಚಯ ಮಾಡಿಕೊಂಡಿದ್ದ ಮಹಿಳೆ ಸಂಪರ್ಕವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತಿಳಿಸಿದ್ದರು. ಆನಂತರ ವಾಟ್ಸಪ್ ಖಾತೆಯಲ್ಲಿ ಮೆಸೇಜ್ ಮಾಡುತ್ತ ಹೂಡಿಕೆ ಮಾಡಲು ಒತ್ತಾಯಿಸಿದ್ದರು.
Spreadxx.com ಹೆಸರಿನಲ್ಲಿ ಲಿಂಕ್ ಕಳುಹಿಸಿದ್ದು, ಅದರ ಮೂಲಕ ಗ್ರೂಪ್ ಜಾಯಿನ್ ಆಗಿದ್ದ ಮಂಗಳೂರಿನ ವ್ಯಕ್ತಿ ಮೊದಲಿಗೆ ತನ್ನ ದುಬೈ ಬ್ಯಾಂಕಿನಿಂದ 27600 ರೂ. ಅದೇ ಅಸಲಿ ಷೇರು ಮಾರುಕಟ್ಟೆಯೆಂದು ನಂಬಿ ಹೂಡಿಕೆ ಮಾಡಿದ್ದರು. ಆನಂತರ, ಮತ್ತಷ್ಟು ಹಣ ಹೂಡಿಕೆ ಮಾಡಲು ಆಮಿಷವೊಡ್ಡಿದ್ದು, ಮಂಗಳೂರಿನ ಯೆಯ್ಯಾಡಿ ಎಸ್ ಬಿಐ ಶಾಖೆಯ ಎನ್ಆರ್ ಐ ಖಾತೆಯಿಂದ 10.82 ಲಕ್ಷ ರೂ. ರವಾನೆ ಮಾಡಿದ್ದಾರೆ. ಆನಂತರ, ಡಿ.20ರಿಂದ 2025ರ ಮಾರ್ಚ್ 3ರ ವರೆಗೆ ಅಪರಿಚಿತ ವ್ಯಕ್ತಿಯ ವಿವಿಧ ಖಾತೆಗಳಿಗೆ ಹಣ ರವಾನಿಸಿದ್ದು ಒಟ್ಟು 76,32,146 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು.
ಷೇರು ಮಾರುಕಟ್ಟೆಯೆಂದು ತೋರಿಸುತ್ತಿದ್ದ ಏಪ್ ನಲ್ಲಿ ತಾನು ಹೂಡಿದ್ದ ಹಣವು ಡಬಲ್ ಆಗಿದ್ದಲ್ಲದೆ, ಒಂದು ಕೋಟಿ 36 ಲಕ್ಷ ಆಗಿರುವಂತೆ ಕಂಡುಬಂದಿತ್ತು. ಇದರಂತೆ, ಮಾರ್ಚ್ 13ರಂದು ಅದರ ಒಂದಷ್ಟು ಮೊತ್ತವನ್ನು ಹಿಂತಿರುಗಿಸಲು ವ್ಯಕ್ತಿ ಕೇಳಿಕೊಂಡಿದ್ದು, ಹಣ ಹಿಂತಿರುಗಿಸಬೇಕಿದ್ದರೆ ಇಂತಿಷ್ಟು ತೆರಿಗೆ ಕಟ್ಟಬೇಕೆಂದು ಕೇಳಿದ್ದಾರೆ. ಮತ್ತೆ ಮತ್ತೆ ತೆರಿಗೆ ಪಾವತಿಸಲು ಹೇಳಿದ್ದರಿಂದ ಸಂಶಯಗೊಂಡಿದ್ದು ಮೋಸದ ಅರಿವಾಗಿ ಮಂಗಳೂರಿನ ಉರ್ವಾ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at the CEN police station after a man lost Rs 76,32,145 by falling prey to a stock market investment scam on Telegram.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am