ಬ್ರೇಕಿಂಗ್ ನ್ಯೂಸ್
22-03-25 10:51 pm Mangalore Correspondent ಕ್ರೈಂ
ಮಂಗಳೂರು, ಮಾ.22 : ವ್ಯಕ್ತಿಯೊಬ್ಬರಿಗೆ ಟೆಲಿಗ್ರಾಮ್ ಏಪ್ ನಲ್ಲಿ ಪರಿಚಯವಾಗಿದ್ದ ಮಹಿಳೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಲಾಭ ಸಿಗುತ್ತದೆ ಎಂದು ನಂಬಿಸಿ ಹೂಡಿಕೆ ಮಾಡಿಸಿದ್ದು, ಮಂಗಳೂರು ಮೂಲದ ದುಬೈ ಉದ್ಯೋಗಿ ಬರೋಬ್ಬರಿ 76 ಲಕ್ಷ ರೂಪಾಯಿ ಕಳಕೊಂಡು ಮೋಸ ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
50 ವರ್ಷದ ಮಂಗಳೂರಿನ ವ್ಯಕ್ತಿ ದುಬೈನಲ್ಲಿ 18 ವರ್ಷಗಳಿಂದ ಪೆಟ್ರೋಲಿಯಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆರು ತಿಂಗಳ ಹಿಂದೆ ರಜೆಯಲ್ಲಿ ಊರಿಗೆ ಮರಳಿದ್ದರು. ಈ ವೇಳೆ, ಕಳೆದ ಡಿಸೆಂಬರ್ 12ರಂದು ಸಾಗರಿಕ ಅಗರ್ವಾಲ್ ಎಂದು ಪರಿಚಯ ಮಾಡಿಕೊಂಡಿದ್ದ ಮಹಿಳೆ ಸಂಪರ್ಕವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭ ಗಳಿಸುವ ಬಗ್ಗೆ ತಿಳಿಸಿದ್ದರು. ಆನಂತರ ವಾಟ್ಸಪ್ ಖಾತೆಯಲ್ಲಿ ಮೆಸೇಜ್ ಮಾಡುತ್ತ ಹೂಡಿಕೆ ಮಾಡಲು ಒತ್ತಾಯಿಸಿದ್ದರು.
Spreadxx.com ಹೆಸರಿನಲ್ಲಿ ಲಿಂಕ್ ಕಳುಹಿಸಿದ್ದು, ಅದರ ಮೂಲಕ ಗ್ರೂಪ್ ಜಾಯಿನ್ ಆಗಿದ್ದ ಮಂಗಳೂರಿನ ವ್ಯಕ್ತಿ ಮೊದಲಿಗೆ ತನ್ನ ದುಬೈ ಬ್ಯಾಂಕಿನಿಂದ 27600 ರೂ. ಅದೇ ಅಸಲಿ ಷೇರು ಮಾರುಕಟ್ಟೆಯೆಂದು ನಂಬಿ ಹೂಡಿಕೆ ಮಾಡಿದ್ದರು. ಆನಂತರ, ಮತ್ತಷ್ಟು ಹಣ ಹೂಡಿಕೆ ಮಾಡಲು ಆಮಿಷವೊಡ್ಡಿದ್ದು, ಮಂಗಳೂರಿನ ಯೆಯ್ಯಾಡಿ ಎಸ್ ಬಿಐ ಶಾಖೆಯ ಎನ್ಆರ್ ಐ ಖಾತೆಯಿಂದ 10.82 ಲಕ್ಷ ರೂ. ರವಾನೆ ಮಾಡಿದ್ದಾರೆ. ಆನಂತರ, ಡಿ.20ರಿಂದ 2025ರ ಮಾರ್ಚ್ 3ರ ವರೆಗೆ ಅಪರಿಚಿತ ವ್ಯಕ್ತಿಯ ವಿವಿಧ ಖಾತೆಗಳಿಗೆ ಹಣ ರವಾನಿಸಿದ್ದು ಒಟ್ಟು 76,32,146 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು.
ಷೇರು ಮಾರುಕಟ್ಟೆಯೆಂದು ತೋರಿಸುತ್ತಿದ್ದ ಏಪ್ ನಲ್ಲಿ ತಾನು ಹೂಡಿದ್ದ ಹಣವು ಡಬಲ್ ಆಗಿದ್ದಲ್ಲದೆ, ಒಂದು ಕೋಟಿ 36 ಲಕ್ಷ ಆಗಿರುವಂತೆ ಕಂಡುಬಂದಿತ್ತು. ಇದರಂತೆ, ಮಾರ್ಚ್ 13ರಂದು ಅದರ ಒಂದಷ್ಟು ಮೊತ್ತವನ್ನು ಹಿಂತಿರುಗಿಸಲು ವ್ಯಕ್ತಿ ಕೇಳಿಕೊಂಡಿದ್ದು, ಹಣ ಹಿಂತಿರುಗಿಸಬೇಕಿದ್ದರೆ ಇಂತಿಷ್ಟು ತೆರಿಗೆ ಕಟ್ಟಬೇಕೆಂದು ಕೇಳಿದ್ದಾರೆ. ಮತ್ತೆ ಮತ್ತೆ ತೆರಿಗೆ ಪಾವತಿಸಲು ಹೇಳಿದ್ದರಿಂದ ಸಂಶಯಗೊಂಡಿದ್ದು ಮೋಸದ ಅರಿವಾಗಿ ಮಂಗಳೂರಿನ ಉರ್ವಾ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at the CEN police station after a man lost Rs 76,32,145 by falling prey to a stock market investment scam on Telegram.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am