ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm