ಬ್ರೇಕಿಂಗ್ ನ್ಯೂಸ್
25-03-25 06:09 pm Bangalore Correspondent ಕ್ರೈಂ
ಬೆಂಗಳೂರು, ಮಾ.25 : ನಿಮ್ಮ ಕುಟುಂಬಕ್ಕೆ ವಾಮಾಚಾರ ಆಗಿದೆ, ಪೂಜೆ ಮಾಡಿಸುತ್ತೇನೆಂದು ಹೇಳಿ ವಿವಾಹಿತ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಿರಣ್ ಕುಮಾರ್ ಗುರೂಜಿ ಹಾಗೂ ಆತನ ಸಹಚರ ಲೋಹಿತ್ ಎಂಬವರ ವಿರುದ್ಧ ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಗಾಯತ್ರಿ ನಗರ ನಿವಾಸಿ 49 ವರ್ಷದ ರೂಪಶ್ರೀ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ಪತಿ ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳು ಸಹ ತಂದೆ ಜೊತೆಗೆ ಅಲ್ಲಿಯೇ ನೆಲೆಸಿದ್ದಾರೆ. ವೃದ್ಧ ತಂದೆಯೊಂದಿಗೆ ವಾಸವಿದ್ದ ಮಹಿಳೆಗೆ 3 ವರ್ಷಗಳ ಹಿಂದೆ ಪರಿಚಯವಾಗಿದ್ದ ಕಿರಣ್ ಕುಮಾರ್ ಗುರೂಜಿ, 'ನಿಮ್ಮ ಕುಟುಂಬದ ಮೇಲೆ ಯಾರೋ ವಾಮಾಚಾರ ಮಾಡಿದ್ದಾರೆ. ಪರಿಹಾರ ಮಾಡದಿದ್ದರೆ ಪತಿಯ ಜೀವಕ್ಕೆ ಅಪಾಯವಿದೆ ಎಂದು ನಂಬಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶೇಷ ಪೂಜೆ ಮಾಡಿಸಬೇಕು ಎಂದು ಹೇಳಿದ್ದಾರೆ.
ಇದಕ್ಕಾಗಿ ದೂರುದಾರ ಮಹಿಳೆಯಿಂದ ಹಂತ, ಹಂತವಾಗಿ ಹಣ ಪಡೆದಿದ್ದಾರೆ. ನಗದು ಮಾತ್ರವಲ್ಲದೆ, ಜಮೀನು ಮತ್ತಿತರರ ಆಸ್ತಿಗಳನ್ನು ಮಾರಿಸಿ, 1 ಕೋಟಿ ರೂ.ಗೂ ಅಧಿಕ ಹಣ ಪಡೆದಿದ್ದಾರೆ. ಅಲ್ಲದೆ, ದೇವರಿಗೆ ಅರ್ಪಿಸಬೇಕೆಂದು ಚಿನ್ನದ 80 ಗ್ರಾಂ ರುದ್ರಾಕ್ಷಿ ಹಾರ, 5 ಗ್ರಾಂ ಉಂಗುರ, 30 ಗ್ರಾಂ ಮ್ಯಾಂಗೋ ಡಿಸೈನ್ ಹಾರ, 28 ಗ್ರಾಂ ಆ್ಯಂಟಿಕ್ ಡಿಸೈನ್ ನೆಕ್ಲೆಸ್, 30 ತಾಳಿ ಬೊಟ್ಟುಗಳನ್ನು ಗುರೂಜಿ ಪಡೆದಿದ್ದಾರೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.
ಚಿನ್ನ ಮತ್ತು ಅಷ್ಟು ಹಣದ ಬಗ್ಗೆ ಕೇಳಿದಾಗ ಕಿರಣ್ ಕುಮಾರ್ ಗುರೂಜಿ ಹಾಗೂ ಲೋಹಿತ್ ಅವಾಚ್ಯ ಪದಗಳಿಂದ ನಿಂದಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರುದಾರ ಮಹಿಳೆ ಆರೋಪಿಸಿದ್ದಾರೆ. ಕಿರಣ್ ಕುಮಾರ್ ಗುರೂಜಿ ಹಾಗೂ ಲೋಹಿತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A woman has filed a police complaint against self-proclaimed spiritual leader Guruji Kiran Kumar, alleging that he swindled her out of crores of rupees and valuable jewelry by convincing her to perform a series of rituals, purportedly aimed at warding off negative energies with the help of witchcraft.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm