ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 07:40 pm
Mangalore Correspondent
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm