ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm