ಬ್ರೇಕಿಂಗ್ ನ್ಯೂಸ್
27-03-25 01:37 pm HK News Desk ಕ್ರೈಂ
ಕೋಲ್ಕತ್ತ , ಮಾ 27: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ಐವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಮಾರ್ಚ್ 18ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಂತೆ ನಟಿಸಿ ತಂಡವೊಂದು ಚಿನಾರ್ ಪಾರ್ಕ್ ಪ್ರದೇಶದಲ್ಲಿ ಮಗಳೊಂದಿಗೆ ವಾಸಿಸುತ್ತಿರುವ ವಿನಿತಾ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಅನುಮಾನ ಮೂಡಿದ್ದು, ವಿನಿತಾ ಅವರು ಬಾಗುಹಾಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದರೋಡೆಕೋರರು 3 ಲಕ್ಷ ನಗದು, 25 ಲಕ್ಷ ಮೌಲ್ಯದ ಆಭರಣಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಲಿಂಕ್ ಮಾಡಲಾದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ತನಿಖೆ ಆರಂಭದಲ್ಲಿ ಕೋಲ್ಕತ್ತದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಯಿತು. ಬಳಿಕ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಪತ್ತೆಹಚ್ಚಲಾಯಿತು.
ಅಪರಾಧದಲ್ಲಿ ಭಾಗಿಯಾಗಿರುವ ಇತರ ಶಂಕಿತರಿಗಾಗಿ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ. ವಿನಿತಾ ಅವರ ತಂದೆಯ ಮರಣದ ನಂತರ ವಿನಿತಾ ಸಿಂಗ್ ಮತ್ತು ಆಕೆಯ ಮಲತಾಯಿ ಆರತಿ ಸಿಂಗ್ ನಡುವೆ ಆಸ್ತಿ ವಿವಾದವಿತ್ತು ಎಂದು ತಿಳಿದುಬಂದಿದೆ. ಬಂಧಿತ ಸಿಐಎಸ್ಎಫ್ ಇನ್ಸ್ಪೆಕ್ಟರ್ ಜೊತೆ ಆರತಿ ಸಂಪರ್ಕ ಹೊಂದಿದ್ದು, ದರೋಡೆ ನಡೆಸಲು ಅವರನ್ನು ಸಂಪರ್ಕಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರತಿ ಸಿಂಗ್ ಅವರನ್ನ ಕೂಡ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Five Central Industrial Security Force (CISF) personnel, including a lady constable, and three others were arrested on Wednesday for allegedly looting a house in the guise of an Income Tax raid near Kolkata on March 18, police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm