ಬ್ರೇಕಿಂಗ್ ನ್ಯೂಸ್
27-03-25 01:37 pm HK News Desk ಕ್ರೈಂ
ಕೋಲ್ಕತ್ತ , ಮಾ 27: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ಐವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಮಾರ್ಚ್ 18ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಂತೆ ನಟಿಸಿ ತಂಡವೊಂದು ಚಿನಾರ್ ಪಾರ್ಕ್ ಪ್ರದೇಶದಲ್ಲಿ ಮಗಳೊಂದಿಗೆ ವಾಸಿಸುತ್ತಿರುವ ವಿನಿತಾ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಅನುಮಾನ ಮೂಡಿದ್ದು, ವಿನಿತಾ ಅವರು ಬಾಗುಹಾಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದರೋಡೆಕೋರರು 3 ಲಕ್ಷ ನಗದು, 25 ಲಕ್ಷ ಮೌಲ್ಯದ ಆಭರಣಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಲಿಂಕ್ ಮಾಡಲಾದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ತನಿಖೆ ಆರಂಭದಲ್ಲಿ ಕೋಲ್ಕತ್ತದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಯಿತು. ಬಳಿಕ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಪತ್ತೆಹಚ್ಚಲಾಯಿತು.
ಅಪರಾಧದಲ್ಲಿ ಭಾಗಿಯಾಗಿರುವ ಇತರ ಶಂಕಿತರಿಗಾಗಿ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ. ವಿನಿತಾ ಅವರ ತಂದೆಯ ಮರಣದ ನಂತರ ವಿನಿತಾ ಸಿಂಗ್ ಮತ್ತು ಆಕೆಯ ಮಲತಾಯಿ ಆರತಿ ಸಿಂಗ್ ನಡುವೆ ಆಸ್ತಿ ವಿವಾದವಿತ್ತು ಎಂದು ತಿಳಿದುಬಂದಿದೆ. ಬಂಧಿತ ಸಿಐಎಸ್ಎಫ್ ಇನ್ಸ್ಪೆಕ್ಟರ್ ಜೊತೆ ಆರತಿ ಸಂಪರ್ಕ ಹೊಂದಿದ್ದು, ದರೋಡೆ ನಡೆಸಲು ಅವರನ್ನು ಸಂಪರ್ಕಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರತಿ ಸಿಂಗ್ ಅವರನ್ನ ಕೂಡ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Five Central Industrial Security Force (CISF) personnel, including a lady constable, and three others were arrested on Wednesday for allegedly looting a house in the guise of an Income Tax raid near Kolkata on March 18, police said.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm